ಕಲಬುರಗಿಯಲ್ಲಿ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆಗೆ ಬಾಲಕಿಯ ತಾಯಿ ಆಗ್ರಹ

Update: 2019-12-08 14:55 GMT

ಕಲಬುರಗಿ, ಡಿ.8: ಚಿಂಚೋಳಿ ತಾಲೂಕಿನ ಯಾಕಪೂರ ಗ್ರಾಮದಲ್ಲಿ 2ನೇ ತರಗತಿಯ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಬಾಲಕಿಯ ತಾಯಿ ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಕಳೆದ ಸೋಮವಾರ ಆರೋಪಿ ಯಲ್ಲಪ್ಪ(35) ಬಾಲಕಿಗೆ ಚಾಕೊಲೇಟ್ ಆಸೆ ತೋರಿಸಿ ಇಲ್ಲಿನ ಮುಲ್ಲಾಮರಿ ಯೋಜನೆ ಕಾಲುವೆ ಬಳಿ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧ್ಯಾಂತ ವಿವಿಧ ಸಂಘಟನೆಯ ಮುಖಂಡರು ಬೃಹತ್ ಪ್ರತಿಭಟನೆ ನಡೆಸಿವೆ ಹಾಗೂ ಇದನ್ನು ತ್ವರಿತಗತಿ ನ್ಯಾಯಾಲಯಕ್ಕೆ ಹತಸ್ತಾಂತರ ಮಾಡು ಮೂಲಕ ಶೀಘ್ರ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿವೆ.

ಮಹಿಳೆಯರ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಸಂಸದರು ಶಾಸಕರು ಧ್ವನಿಗೂಡಿಸಿ, ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು. ಬಾಲಕಿಯರ ಹಾಗೂ ಮಹಿಳೆಯರ ರಕ್ಷಣೆ ಹಿತದೃಷ್ಠಿಯಿಂದ ಹಾಸ್ಟಲ್ ಮತ್ತು ಶಾಲೆಗಳಲ್ಲಿ ಸಿಸಿಟಿವಿ ಅಳವಡಿಸಲು ಸರಕಾರ ಕ್ರಮ ಕೈಗೊಳಬೇಕೆಂದು ಜಿಲ್ಲಾ ಸಿಪಿಎಂ ಮುಖಂಡ ಶರಣಬಸಪ್ಪ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News