ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಯ ಡಾ.ಕೆ.ಸುಧಾಕರ್ ಗೆ ಗೆಲುವು
Update: 2019-12-09 05:42 GMT
ಬೆಂಗಳೂರು, ಡಿ.9: ರಾಜ್ಯದಲ್ಲಿ 15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದ್ದು, 12 ಕ್ಷೇತ್ರಗಳಲ್ಲಿ ಬಿಜೆಪಿ, ಕಾಂಗ್ರೆಸ್ 2ರಲ್ಲಿ ಮೇಲುಗೈ ಸಾಧಿಸಿದೆ. ಹೊಸಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ನಿರಂತರ ಮುನ್ನಡೆ ಸಾಧಿಸಿದ್ದಾರೆ.
ಯಲ್ಲಾಪುರದಲ್ಲಿ ಬಿಜೆಪಿಯ ಶಿವರಾಮ್ ಹೆಬ್ಬಾರ್ ಗೆಲುವಿನತ್ತ ಹೆಜ್ಜೆ ಇರಿಸಿದ್ದಾರೆ. ಅವರ ಗೆಲುವಿನ ಅಧಿಕೃತ ಘೋಷಣೆ ಬಾಕಿ ಇದೆ. ಮೊದಲ ಸುತ್ತಿನಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಹೆಬ್ಬಾರ್ ಅಂತಿಮವಾಗಿ 17ನೇ ಸುತ್ತಿನಲ್ಲಿ 31, 406 ಮತಗಳ ಅಂತರದಿಂದ ಮೇಲುಗೈ ಸಾಧಿಸಿದ್ದಾರೆ.
ಯಶವಂತಪುರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಹಾವು ಏಣಿ ನಡೆದಿದೆ.
►ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಯ ಡಾ.ಕೆ.ಸುಧಾಕರ್, ಕೆಆರ್ ಪೇಟೆಯಲ್ಲಿ ಬಿಜೆಪಿಯ ನಾರಾಯಣ ಗೌಡ ಗೆಲುವು ಸಾಧಿಸಿದ್ದಾರೆ. ಆದರೆ ಚುನಾವಣೆ ಆಯೋಗದಿಂದ ಅಧಿಕೃತ ಘೋಷಣೆ ಬಾಕಿ ಇದೆ.