ರಾಜ್ಯ ವಿಧಾನಸಭಾ ಉಪಚುನಾವಣೆ: 12 ಕ್ಷೇತ್ರಗಳಲ್ಲಿ ಬಿಜೆಪಿ ಪಾರಮ್ಯ
Update: 2019-12-09 06:19 GMT
ಬೆಂಗಳೂರು: ರಾಜ್ಯ ವಿಧಾನಸಭಾ ಉಪಚುನಾವಣೆಯ ಸಂಪೂರ್ಣ ಫಲಿತಾಂಶ ಇಂದು ಪ್ರಕಟಗೊಳ್ಳಲಿದ್ದು, ಸದ್ಯದ ಪರಿಸ್ಥಿತಿಯಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಬಹುತೇಕ ಖಚಿತಗೊಂಡಿದೆ.
ಈಗಾಗಲೇ ಬಿಜೆಪಿಯ ಬಿ.ಸಿ. ಪಾಟೀಲ್, ನಾರಾಯಣ ಗೌಡ, ಡಾ.ಕೆ. ಸುಧಾಕರ್, ಶಿವರಾಮ್ ಹೆಬ್ಬಾರ್ ಜಯ ಗಳಿಸಿದ್ದಾರೆ. ಆದರೆ ಅಧಿಕೃತ ಘೋಷಣೆ ಇನ್ನಷ್ಟೇ ಹೊರಬೀಳಬೇಕಿದೆ.
ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ ಜಯ ಗಳಿಸುವ ಸಾಧ್ಯತೆ ಇದೆ. ಆರಂಭದಲ್ಲಿ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದ ಜೆಡಿಎಸ್ ನಂತರ ಎರಡೂ ಕ್ಷೇತ್ರಗಳಲ್ಲೂ ಹಿನ್ನಡೆ ಅನುಭವಿಸಿದೆ.