ಹಾವೇರಿ ಕಾಂಗ್ರೆಸ್ ಮುಕ್ತವಾಗಿದೆ: ಬಿ.ಸಿ.ಪಾಟೀಲ್

Update: 2019-12-09 15:34 GMT

ಹಾವೇರಿ, ಡಿ.9: ಉಪಚುನಾವಣೆಯಲ್ಲಿ ಹಿರೇಕೆರೂರು ಮತ್ತು ರಾಣೆಬೆನ್ನೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುವ ಮೂಲಕ ಜಿಲ್ಲೆಯ ಒಟ್ಟು 6 ಕ್ಷೇತ್ರಗಳಲ್ಲೂ ಬಿಜೆಪಿ ಗೆದ್ದಿದ್ದು, ಈ ಮೂಲಕ ಜಿಲ್ಲೆಯೂ ಕಾಂಗ್ರೆಸ್ ಮುಕ್ತ ಆಗಿದೆ ಎಂದು ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ಹೇಳಿದರು. 

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಮತ್ತು ರಾಷ್ಟ್ರ ಕಾಂಗ್ರೆಸ್ ಮುಕ್ತವಾಗುತ್ತದೆ ಎಂಬುದಕ್ಕೆ ಈ ಚುನಾವಣಾ ಫಲಿತಾಂಶ ಮುನ್ಸೂಚನೆಯಾಗಿದ್ದು, ಮತದಾರರು ಜನತಾ ನ್ಯಾಯಾಲಯದಲ್ಲಿ ನಮ್ಮನ್ನು ಅರ್ಹರನ್ನಾಗಿ ಮಾಡಿದ್ದಾರೆ ಎಂದು ತಿಳಿಸಿದರು.

ಯು.ಬಿ. ಬಣಕಾರ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಅವರಿಗೆ ಮಾತು ಕೊಟ್ಟ ಹಾಗೆ ಪ್ರತಿ ಹೆಜ್ಜೆಯಲ್ಲೂ ಜೊತೆಯಾಗಿ ಶ್ರಮಿಸಿದರು. ತಾಲೂಕಿನಲ್ಲಿ ಅಭಿವೃದ್ಧಿ ಪರ್ವ ಮಾಡಲು ಶಪಥ ಮಾಡುತ್ತೇನೆ ಎಂದು ಭರವಸೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News