ಉಪಚುನಾವಣೆ: ಗೆಲುವಿನ ಸಂಭ್ರಮಾಚರಣೆ ವೇಳೆ ಅಭಿಮಾನಿ ಸಾವು
Update: 2019-12-09 15:35 GMT
ಬೆಂಗಳೂರು, ಡಿ.9: ಉಪಚುನಾವಣೆಯಲ್ಲಿ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಗೆಲುವಿನ ಸಂಭ್ರಮಾಚರಣೆ ವೇಳೆ ಅಭಿಯಾನಿಯೋರ್ವ ಮೃತಪಟ್ಟಿದ್ದಾರೆ.
ಇಲ್ಲಿನ ಕಟ್ಟಿಗೇನಹಳ್ಳಿ ನಿವಾಸಿ ರಿಯಾಝ್ ಬೇಗ್(50) ಮೃತ ಅಭಿಮಾನಿ ಎಂದು ತಿಳಿದುಬಂದಿದೆ.
ಸೋಮವಾರ ಮಧ್ಯಾಹ್ನ ಸುಮಾರಿಗೆ ಶರತ್ ಬಚ್ಚೇಗೌಡ ಗೆಲುವಿನ ಸಂಭ್ರಮಾಚರಣೆ ನಡೆಯುತ್ತಿದ್ದ ವೇಳೆ ಏಕಾಏಕಿ ರಿಯಾಝ್ ಬೇಗ್ ಕುಸಿದು ಬಿದ್ದು ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.