ವಿಶೇಷ ಶಿಕ್ಷಕ ನೇಮಕಾತಿ: ಅರ್ಜಿ ಆಹ್ವಾನ

Update: 2019-12-09 15:52 GMT

ಮಂಗಳೂರು, ಡಿ.9: ಸಮನ್ವಯ ಶಿಕ್ಷಣದ ಕಾರ್ಯತಂತ್ರದಡಿ ಜಿಲ್ಲೆಯಲ್ಲಿ ಖಾಲಿ ಇರುವ ಬಿಐಇಆರ್‌ಟಿ ಪ್ರೌಢ ಹಾಗೂ ಪ್ರಾಥಮಿಕ ಹುದ್ದೆಗೆ ವಿಶೇಷ ಡಿ.ಇಡಿ/ವಿಶೇಷ ಬಿ.ಇಡಿ ವಿದ್ಯಾರ್ಹತೆ ಹೊಂದಿರುವ ಅರ್ಹ ವಿಶೇಷ ಶಿಕ್ಷಕರನ್ನು ನೇರ ಗುತ್ತಿಗೆ ಮೂಲಕ ನೇಮಿಸಲು ಅರ್ಜಿ ಆಹ್ವಾನಿಸಲಾಗಿದೆ.

ಸೂಕ್ತ ದಾಖಲೆಯೊಂದಿಗೆ ಸಮಗ್ರ ಶಿಕ್ಷಣ ಕರ್ನಾಟಕ, ದ.ಕ. ಜಿಲ್ಲಾ ಪಂಚಾಯತ್ ಕಟ್ಟಡ, ಕೊಟ್ಟಾರ, ಮಂಗಳೂರು, ಜಿಲ್ಲಾ ಕಚೇರಿಗೆ ಡಿ.12ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 0824-2452100ನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News