ತೆರವಾದ ಪರಿಷತ್ ಸ್ಥಾನಕ್ಕೆ ಬಿಜೆಪಿಯಲ್ಲಿ ಆರಂಭಗೊಂಡ ಲಾಬಿ

Update: 2019-12-09 16:03 GMT
ರಿಝ್ವಾನ್ ಅರ್ಷದ್

ಬೆಂಗಳೂರು, ಡಿ.9: ವಿಧಾನ ಪರಿಷತ್ ಸದಸ್ಯ ರಿಝ್ವಾನ್ ಅರ್ಷದ್ ಶಿವಾಜಿ ನಗರ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿರುವುದರಿಂದ ಅವರಿಂದ ತೆರವಾಗುವ ಸ್ಥಾನ ಗಿಟ್ಟಿಸಿಕೊಳ್ಳಲು ಬಿಜೆಪಿಯಲ್ಲಿ ಲಾಬಿ ಆರಂಭಗೊಂಡಿದೆ.

ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಉಪಚುನಾವಣೆಯಲ್ಲಿ ಸೋತಿರುವ ಎಚ್.ವಿಶ್ವನಾಥ್, ಎಂ.ಟಿ.ಬಿ.ನಾಗರಾಜ್ ಹಾಗೂ ಕ್ಷೇತ್ರ ಬಿಟ್ಟುಕೊಟ್ಟ ಆರ್.ಶಂಕರ್ ಅವರು ಈ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ. ಹಾಲಿ ಉಪಮುಖ್ಯಮಂತ್ರಿ ಆಗಿರುವ ಲಕ್ಷ್ಮಣ್ ಸವದಿ ಅವರಿಗೆ ಈ ಸ್ಥಾನ ಸಿಗುವುದು ಬಹುತೇಕ ಖಚಿತವಾಗಿದೆ. ಆದರೂ, ಇನ್ನುಳಿದ ಮೂವರು ತೀವ್ರ ಪೈಪೋಟಿ ನಡೆಸಿದ್ದಾರೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News