ಎರಡೂ ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡ ವಾಟಾಳ್

Update: 2019-12-09 17:49 GMT

ಬೆಂಗಳೂರು, ಡಿ.9: ಪಕ್ಷಾಂತರಿಗಳಿಗೆ ತಕ್ಕ ಪಾಠ ಕಲಿಸಲು 2 ಕ್ಷೇತ್ರಗಳಿಂದ ಉಪಚುನಾವಣೆ ಅಖಾಡಕ್ಕಿಳಿದಿದ್ದ ಕನ್ನಡ ಪಕ್ಷದ ಅಧ್ಯಕ್ಷ, ಹೋರಾಟಗಾರ ವಾಟಾಳ್ ನಾಗರಾಜ್ ಅವರು ಎರಡರಲ್ಲೂ ಠೇವಣಿ ಕಳೆದುಕೊಂಡಿದ್ದಾರೆ.

ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರ ಹಾಗೂ ಶಿವಾಜಿನಗರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ವಾಟಾಳ್ ನಾಗರಾಜ್ ಕಣದಲ್ಲಿದ್ದರು. ಎರಡೂ ಕ್ಷೇತ್ರಗಳಲ್ಲೂ ರಾಜಕೀಯ ಬಲಾಢ್ಯ ಪಕ್ಷಗಳ ಎದುರು ಅವರು ನಿರೀಕ್ಷಿತ ಸಾಧನೆ ಮಾಡಲಿಲ್ಲ. ವಾಟಾಳ್ ನಾಗರಾಜ್‌ಗೆ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ 832 ಮತಗಳು ಹಾಗೂ ಶಿವಾಜಿನಗರ ಕ್ಷೇತ್ರದಲ್ಲಿ 255 ಮತಗಳು ಲಭಿಸಿವೆ. ಈ ಮೂಲಕ ಎರಡೂ ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News