ಬಿಜೆಪಿ ಆಡಳಿತಕ್ಕೆ ಜನಮನ್ನಣೆ: ಡಿಸಿಎಂ ಕಾರಜೋಳ

Update: 2019-12-09 17:58 GMT

ಬೆಂಗಳೂರು, ಡಿ. 9: ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರವನ್ನು ಮೆಚ್ಚಿ ಜನ ಮನ್ನಣೆ, ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡುವ ಮೂಲಕ ಆಶೀರ್ವಾದ ಮಾಡಿದ್ದಾರೆಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಈ ಉಪಚುನಾವಣೆಯಲ್ಲಿ ಆಯ್ಕೆಯಾದ ಬಿಜೆಪಿಯ ಎಲ್ಲ ಶಾಸಕರಿಗೆ ಅಭಿನಂದನೆಗಳು. ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಪಕ್ಷದ ಮುಖಂಡರಿಗೆ, ಅಭಿಮಾನಿಗಳಿಗೆ, ಕಾರ್ಯಕರ್ತರಿಗೆ ಕೃತಜ್ಞತೆಗಳು. ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಿದ ಮತದಾರರಿಗೆ ಆಭಾರಿ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News