ವೃಕ್ಷ ಬಿಸಿನೆಸ್ ಸೊಲ್ಯೂಶನ್ ವಿರುದ್ಧ ಪ್ರತಿಭಟನೆ

Update: 2019-12-10 11:06 GMT

ಮಂಗಳೂರು, ಡಿ.10: ವೃಕ್ಷ ಬಿಸಿನೆಸ್ ಸೊಲ್ಯೂಶನ್ ಎಂಬ ಸಂಸ್ಥೆಯು ಗ್ರಾಹಕರಿಂದ ಸಂಗ್ರಹಿಸಿದ ಹಣವನ್ನು ಮರಳಿಸದೆ ವಂಚಿಸಿದೆ ಎಂದು ಆರೋಪಿಸಿ ತುಳುನಾರ ರಕ್ಷಣಾ ವೇದಿಕೆಯು ದ.ಕ. ಜಿಲ್ಲಾಧಿಕಾರಿ ಕಚೇರಿಯ ಎದುರು ಮಂಗಳವಾರ ಪ್ರತಿಭಟನೆ ನಡೆಸಿತು.

ಈಗಾಗಲೆ ಸಂಸ್ಥೆಯ ಆಡಳಿತ ನಿರ್ದೇಶಕರನ್ನು ಬಂಧಿಸಲಾಗಿದೆ. ಸಿಐಡಿ ತನಿಖೆಯೂ ಆಗಿದೆ. ಆದರೆ, ಇನ್ನೂ ಕೂಡಾ ಸಂಸ್ಥೆಯು ವಸೂಲಿ ಮಾಡಿದ ಹಣವು ಗ್ರಾಹಕರ ಕೈ ಸೇರಿಲ್ಲ ಎಂದು ವೇದಿಕೆಯ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಆರೋಪಿಸಿದರು. ಅಲ್ಲದೆ, ಈ ಬಗ್ಗೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News