ಡಿ.13ರಂದು ಪ್ರಕಾಶ್ ಶೆಟ್ಟಿ ಹುಟ್ಟೂರ ಸನ್ಮಾನ ಸಮಾರಂಭ

Update: 2019-12-10 14:06 GMT

ಉಡುಪಿ, ಡಿ.10: ಈ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬೆಂಗಳೂರಿನ ಎಂಆರ್‌ಜಿ ಗ್ರೂಪ್‌ನ ಚೆಯರ್‌ಮೆನ್ ಕೊರಂಗ್ರಪಾಡಿಯ ಪ್ರಕಾಶ್ ಶೆಟ್ಟಿ ಅವರಿಗೆ ಹುಟ್ಟೂರ ಸನ್ಮಾನ ಸಮಾರಂಭವನ್ನು ಡಿ.13ರಂದು ಬೆಳಗ್ಗೆ 11:30ಕ್ಕೆ ಕೊರಂಗ್ರ ಪಾಡಿ ಶ್ರೀಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ.

ಬೆಳಗ್ಗೆ 11:08ಕ್ಕೆ ಶ್ರೀಮಹಾವಿಷ್ಣುಮೂರ್ತಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರದ ಅಂಗವಾಗಿ ಸುತ್ತುಪೌಳಿಯ ಪಾದುಕಾನ್ಯಾಸ, ಶಿಲಾಸ್ತಂಭ ಸ್ಥಾಪನೆ, ಮಹಾದ್ವಾರ ನ್ಯಾಸ ಕಾರ್ಯಕ್ರಮ ಜರಗಲಿದೆ ಎಂದು ಕಾರ್ಯಕ್ರಮ ಸಂಯೋಜಕ ಹಾಗೂ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷ ವಾಸುದೇವ ಶೆಟ್ಟಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.

ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಿತಿಯ ಗೌರವಾಧ್ಯಕ್ಷ ಕೆ.ಜಿ. ರಾಘವೇಂದ್ರ ತಂತ್ರಿ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಕಾಪು ಶಾಸಕ ಲಾಲಾಜಿ ಆರ್.ಮೆಂಡನ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮೊದಲಾದವರು ಭಾಗವಹಿಸಲಿರುವರು. ಈ ಸಂದರ್ಭದಲ್ಲಿ ಗ್ರಾಮದ 10 ಅಶಕ್ತ ಬಡ ಕುಟುಂಬಗಳಿಗೆ ತಲಾ 5000 ರೂ. ಮತ್ತು ಕ್ರೀಡೆ ಹಾಗೂ ಶೈಕ್ಷಣಿಕವಾಗಿ ಸಾಧನೆಗೈದ 10 ವಿದ್ಯಾರ್ಥಿಗಳಿಗೆ ತಲಾ 10ಸಾವಿರ ರೂ. ಸಹಾಯಧನ ನೀಡಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಸಮಿತಿ ಅಧ್ಯಕ್ಷ ಕೆ.ಎಸ್.ಕೃಷ್ಣಮೂರ್ತಿ ತಂತ್ರಿ, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ, ಕೋಶಾಧಿಕಾರಿ ಸಂದೀಪ್ ಮಂಜ, ಕುಮಾರ ಗುರು ತಂತ್ರಿ, ಸಾಯಿನಾಥ್, ಉದಯ ಆಚಾರ್ಯ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News