ಉಡುಪಿ: ನಿಷೇಧಿತ ಪ್ಲಾಸ್ಟಿಕ್ ವಶ; ದಂಡ ವಸೂಲಿ

Update: 2019-12-10 14:20 GMT

ಉಡುಪಿ, ಡಿ.10: ಉಡುಪಿ ನಗರಸಭಾ ವ್ಯಾಪ್ತಿಯ ಸರ್ವಿಸ್ ಬಸ್ ನಿಲ್ದಾಣ ದ ಬಳಿ ಇರುವ ಹೂವಿನ ಮಾರುಕಟ್ಟೆ ಹಾಗೂ ವಿವಿಧ ಅಂಗಡಿಗಳಿಗೆ ಸಾರ್ವಜನಿಕ ದೂರಿನ ಮೇರೆಗೆ ಸೋಮವಾರ ಹಠಾತ್ ದಾಳಿ ನಡೆಸಿ ಒಟ್ಟು 103 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡು 6000 ರೂ. ದಂಡ ವಸೂಲಿ ಮಾಡಲಾಯಿತು.

ಸಾರ್ವಜನಿಕರು ಹಾಗೂ ಉದ್ದಿಮೆದಾರರು ನಾನ್ ಓವನ್ ಚೀಲಗಳು ಸೇರಿದಂತೆ ನಿಷೇದಿತ ಪ್ಲಾಸ್ಟಿಕ್ ಚೀಲಗಳು ಮತ್ತು ಇನ್ನಿತರ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಯಾ ಮಾರಾಟ ಇನ್ನು ಮುಂದೆಯೂ ಕಂಡುಬಂದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ದಂಡ ವಿಧಿಸಿ ನಿಷೇಧಿತ ಪ್ಲಾಸ್ಟಿಕ್‌ವಸ್ತುಗಳನ್ನು ವಶಪಡಿಸಿಕೊಂಡು ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೌರಾಯುಕ್ತ ಆನಂದ ಲ್ಲೋಳಿಕರ್ ಎಚ್ಚರಿಕೆ ನೀಡಿದ್ದಾರೆ.
 ಸಾರ್ವಜನಿಕರು ಹಾಗೂ ಉದ್ದಿಮೆದಾರರು ನಾನ್ ಓವನ್ ಚೀಲಗಳು ಸೇರಿದಂತೆ ನಿಷೇದಿತ ಪ್ಲಾಸ್ಟಿಕ್ ಚೀಲಗಳು ಮತ್ತು ಇನ್ನಿತರ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಯಾ ಮಾರಾಟ ಇನ್ನು ಮುಂದೆಯೂ ಕಂಡುಬಂದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ದಂಡ ವಿಧಿಸಿ ನಿಷೇಧಿತ ಪ್ಲಾಸ್ಟಿಕ್‌ವಸ್ತುಗಳನ್ನು ವಶಪಡಿಸಿಕೊಂಡು ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೌರಾಯುಕ್ತ ಆನಂದ ಕಲ್ಲೋಳಿಕರ್ ಎಚ್ಚರಿಕೆ ನೀಡಿದ್ದಾರೆ. ದಾಳಿಯಲ್ಲಿ ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕರಾದ ಶಶಿರೇಖ, ಕರುಣಾಕರ ವಿ ಮತ್ತು ಸ್ಯಾನಿಟರಿ ಸೂಪರ್‌ವೈಸರ್ ನಾಗಾರ್ಜುನ್, ಸುನೀಲ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News