×
Ad

ತೊಕ್ಕೊಟ್ಟು : ಪೌರತ್ವ ತಿದ್ದುಪಡಿ ಮಸೂದೆಯ ವಿರುದ್ಧ ಎಸ್ ಡಿ ಪಿ ಐ ಪ್ರತಿಭಟನೆ

Update: 2019-12-10 20:14 IST

ತೊಕ್ಕೊಟ್ಟು : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ವಿಧಾನ ಸಭಾ ಕ್ಷೇತ್ರ ಸಮಿತಿ ವತಿಯಿಂದ ಕೇಂದ್ರ ಸರಕಾರದ ಪೌರತ್ವ ತಿದ್ದುಪಡಿ ಮಸೂದೆ ಯನ್ನು ಲೋಕಸಭೆಯಲ್ಲಿ ಅಂಗೀಕಾರಗೊಳಿಸಿದರ ವಿರುದ್ಧವಾಗಿ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಪ್ರತಿಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆಯ ಪ್ರತಿಯನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿ ಬಹಿಷ್ಕರಿಸಲಾಯಿತು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಮುಖ್ಯ ಭಾಷಣ ಮಾಡಿದರು, ಜಿಲ್ಲಾ ಸಮಿತಿ ಸದಸ್ಯರಾದ ಝಾಹಿದ್ ಮಲಾರ್ ಮತ್ತು ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಪ್ರತಿಭಟನಾ ಸಭೆಯಲ್ಲಿ ಕ್ಷೇತ್ರ ಅಧ್ಯಕ್ಷ ಅಬ್ಬಾಸ್ ಕೀನ್ಯ, ಕ್ಷೇತ್ರ ಕಾರ್ಯದರ್ಶಿ ಲತೀಫ್ ಕೊಡಿಜಾಲ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News