ಶಾಸಕ ಸೆಂಗಾರ್ ವಿರುದ್ಧದ ಉನ್ನಾವೊ ಅತ್ಯಾಚಾರ ಪ್ರಕರಣದ ತೀರ್ಪು ಕಾಯ್ದಿರಿಸಿದ ನ್ಯಾಯಾಲಯ

Update: 2019-12-10 16:17 GMT

ಹೊಸದಿಲ್ಲಿ, ಡಿ.10: ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಪ್ರಮುಖ ಆರೋಪಿಯಾಗಿರುವ ,ಉತ್ತರ ಪ್ರದೇಶದ ಉನ್ನಾವೊದಲ್ಲಿ 2017ರಲ್ಲಿ ನಡೆದಿದ್ದ ಯುವತಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ ತೀರ್ಪನ್ನು ಮಂಗಳವಾರ ದಿಲ್ಲಿಯ ಜಿಲ್ಲಾ ನ್ಯಾಯಾಲಯವು ಡಿ.16ಕ್ಕೆ ಕಾಯ್ದಿರಿಸಿದೆ.

ಯುವತಿಯು ಅಪ್ರಾಪ್ತ ವಯಸ್ಕಳಾಗಿದ್ದಾಗ ಸೆಂಗಾರ್ ಆಕೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದಾಗಿ ಆರೋಪಿಸಲಾಗಿದ್ದು, ನ್ಯಾಯಾಲಯವು ಸಹ ಆರೋಪಿ ಶಶಿ ಸಿಂಗ್ ವಿರುದ್ಧವೂ ಆರೋಪಗಳನ್ನು ರೂಪಿಸಿತ್ತು.

ಕಳೆದ ಜುಲೈನಲ್ಲಿ ಅತ್ಯಾಚಾರ ಸಂತ್ರಸ್ತೆಯು ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿಯೊಂದು ಢಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ ಆಕೆಯ ಸಂಬಂಧಿ ಮಹಿಳೆಯರಿಬ್ಬರು ಮೃತಪಟ್ಟಿದ್ದು,ಯುವತಿ ಮತ್ತು ಆಕೆಯ ವಕೀಲ ಗಂಭೀರವಾಗಿ ಗಾಯಗೊಂಡಿದ್ದರು. ಈ ಅಪಘಾತದ ಹಿಂದೆ ಸೆಂಗಾರ್ ಕೈವಾಡವಿದೆ ಎಂದು ಆಕೆಯ ಕುಟುಂಬವು ಆರೋಪಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News