ವಿದ್ಯಾರ್ಥಿನಿಗೆ ಕಿರುಕುಳ ಯತ್ನ : ಆರೋಪಿ ಬಂಧನ

Update: 2019-12-10 16:34 GMT

ಪುತ್ತೂರು : ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯೊಬ್ಬಳ ಮಾನಭಂಗಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಸಂಪ್ಯ ಪೊಲೀಸರು ಆರೋಪಿಯನ್ನು ಸೋಮವಾರ ಬಂಧಿಸಿದ್ದಾರೆ.  ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ದೇವಿನಗರ ನಿವಾಸಿ ಹಸೈನಾರ್(25) ಬಂಧಿತ ಆರೋಪಿ.

15ರ ಹರೆಯದ ಬಾಲಕಿಗೆ ಆರೋಪಿ ಹಸೈನಾರ್ ಕಿರುಕುಳ ನೀಡಿರುವುದಾಗಿ ದೂರಲಾಗಿದೆ. ವಿದ್ಯಾರ್ಥಿನಿಯ ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದು, ವಿದ್ಯಾರ್ಥಿನಿ ಒಬ್ಬಳೇ ಮನೆಯಲ್ಲಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಆರೋಪಿ ಮಾನಭಂಗಕ್ಕೆ ಯತ್ನಿಸಿದ ವೇಳೆ ಆತನ ಕೈಯಿಂದ ತಪ್ಪಿಸಿಕೊಂಡ ವಿದ್ಯಾರ್ಥಿನಿ ಬೊಬ್ಬೆ ಹೊಡೆದಿದ್ದು, ಈ ಸಂದರ್ಭ ಆರೋಪಿ ಮನೆಯಿಂದ ಹೊರಗೆ ಓಡಿ ಹೋಗಿ ತಪ್ಪಿಸಿಕೊಂಡಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ದೂರಿಗೆ ಸಂಬಂಧಿಸಿ ಪೋಕ್ಸೋ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಸಂಪ್ಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News