ಬ್ಯಾಂಕ್ ನೇಮಕಾತಿ ಪರೀಕ್ಷೆಗೆ ತರಬೇತಿ; ಅವಧಿ ವಿಸ್ತರಣೆ

Update: 2019-12-11 14:25 GMT

ಉಡುಪಿ, ಡಿ.11: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐಬಿಪಿಎಸ್ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರೇತಿಯನ್ನು ಆಯೋಜಿಸಿದೆ.

ದೇಶದ ವಿವಿಧ ರಾಷ್ಟ್ರೀಕೃತ ಬ್ಯಾಂಕ್‌ಗಳು ಈ ಸಾಲಿನಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಅಧಿಕಾರಿಗಳ ಹಾಗೂ ಗುಮಾಸ್ತರ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿವೆ. ತರಬೇತಿಗೆ ಹೆಸರನ್ನು ನೊಂದಾಯಿಸುವ ಅವಧಿಯನ್ನು ವಿಸ್ತರಿಸಲಾಗಿದ್ದು, ಆಸಕ್ತರು ಡಿ.18ರ ಒಳಗೆ ಮ್ಯೆಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು.

ಹೆಚ್ಚಿನ ವಿವರಗಳಿಗೆ ದೂ.ಸಂಖ್ಯೆ: 0821-2515944 ಅಥವಾ ಮೊಬೈಲ್: 9964760090 ನ್ನು ಸಂಪರ್ಕಿಸುವಂತೆ ಕರಾಮುವಿ ಕುಲಸಚಿವ ಪ್ರೊ.ಬಿ. ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News