ಬ್ರಹ್ಮಾವರ: ಮಿನಿ ವಿಧಾನಸೌಧಕ್ಕೆ 10 ಕೋಟಿ ರೂ.ಮಂಜೂರು- ರಘುಪತಿ ಭಟ್
Update: 2019-12-11 15:53 GMT
ಉಡುಪಿ, ಡಿ.11: ಬ್ರಹ್ಮಾವರದಲ್ಲಿ ನಿರ್ಮಿಸಲಾಗುವ ಮಿನಿ ವಿಧಾನಸೌಧಕ್ಕೆ ಈಗಾಗಲೇ 10 ಕೋಟಿ ರೂ.ಮಂಜೂರಾಗಿದ್ದು, ಟೆಂಡರ್ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಕಂದಾಯ ಸಚಿವ ಆರ್.ಅಶೋಕ್ ಅವರು ಜ. 8ರಂದು ಉಡುಪಿ ಜಿಲ್ಲೆಗೆ ಆಗಮಿಸಲಿದ್ದು, ಬ್ರಹ್ಮಾವರ ಮಿನಿ ವಿಧಾನಸೌಧಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದವರು ತಿಳಿಸಿದ್ದಾರೆ.