ಮಾತಿನ ಮೇಲೆ ಹಿಡಿತವಿರಲಿ: ಕುಮಾರಸ್ವಾಮಿ ವಿರುದ್ಧ ಜಿ.ಟಿ.ದೇವೇಗೌಡ ಆಕ್ರೋಶ

Update: 2019-12-11 17:03 GMT

ಮೈಸೂರು,ಡಿ.11: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮುತ್ತಿನಂತ ಮಾತು ಆಡುತ್ತಾರೆ ಅಂತ ಎಲ್ಲರೂ ಅಂದುಕೊಂಡಿದ್ದರು. ಆದರೆ ಇತ್ತೀಚೆಗೆ ಅವರು ಆಡುತ್ತಿರುವ ಮಾತುಗಳು ಅಭಿಮಾನಿಗಳನ್ನೇ ಕೆರಳಿಸಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.

ಶಾಸಕ ಜಿ.ಟಿ.ದೇವೇಗೌಡರಿಗೆ ಫ್ಯೂಸ್ ಇಲ್ಲ ಎಂಬ ಹೇಳಿಕೆ ನೀಡಿದ್ದ ಎಚ್.ಡಿ.ಕುಮಾರಸ್ವಾಮಿಗೆ ತಿರುಗೇಟು ನೀಡಿದ ಅವರು, ಕುಮಾರಸ್ವಾಮಿ ಅವರು ಆಡುವ ಮಾತಿನ ಮೇಲೆ ಹಿಡಿತ ಇಟ್ಟುಕೊಳ್ಳಲಿ ಎಂದು ಹೇಳಿದರು.

ಇತ್ತೀಚೆಗೆ ಕುಮಾರಸ್ವಾಮಿ ಅವರ ನಡೆಯೇ ಬೇರೆ, ನುಡಿಯೇ ಬೇರೆ ಆಗಿದೆ. ಇನ್ನಾದರೂ ಅವರು ಬದಲಾಗಬೇಕು ಎಂದು ಸಲಹೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News