ಅಂಗನವಾಡಿ ನೌಕರರ ಹೋರಾಟಕ್ಕೆ ತಾತ್ಕಾಲಿಕ ತಡೆ

Update: 2019-12-11 18:30 GMT
ಫೈಲ್ ಚಿತ್ರ

ಬೆಂಗಳೂರು, ಡಿ.11: ಸರಕಾರಿ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿಗಳನ್ನು ಪ್ರಾರಂಭಿಸುವ ಕುರಿತು ಚರ್ಚಿಸಲು ಸರಕಾರ ಅಧಿಕೃತ ಸಭೆಗೆ ಆಹ್ವಾನಿಸಿರುವ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿ ಹೋರಾಟವನ್ನು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು) ತಾತ್ಕಾಲಿಕವಾಗಿ ನಿಲ್ಲಿಸಿದೆ.

ಈ ಕುರಿತು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು) ಅಧ್ಯಕ್ಷೆ ಎಸ್.ವರಲಕ್ಷ್ಮೀ, ಡಿ.16ರಂದು ಸರಕಾರದ ಮುಖ್ಯ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ಸರಕಾರಿ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ ಪ್ರಾರಂಭಿಸುವ ಕುರಿತು ಅಧಿಕೃತ ಸಭೆ ನಡೆಯಲಿದೆ. ಹಾಗಾಗಿ, ಹೋರಾಟವನ್ನು ತಾತ್ಕಾಲಿಕವಾಗಿ ಹೋರಾಟ ಹಿಂಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News