ಗ್ರಾಮಕರಣಿಕರ ಹುದ್ದೆ ನೇಮಕಾತಿ: ಆಮಿಷಕ್ಕೆ ಒಳಗಾಗದಂತೆ ಉಡುಪಿ ಡಿಸಿ ಸೂಚನೆ

Update: 2019-12-12 13:56 GMT

ಉಡುಪಿ, ಡಿ.12: ಉಡುಪಿ ಜಿಲ್ಲೆಯಲ್ಲಿ 2019ನೇ ಸಾಲಿನ ಗ್ರಾಮ ಕರಣಿಕರ ಹುದ್ದೆಗೆ ನೇರ ನೇಮಕಾತಿ ಪ್ರಕ್ರಿಯೆಯು ಪ್ರಗತಿಯಲ್ಲಿದ್ದು, ಸರಕಾರದ ಮಾರ್ಗಸೂಚಿಯಡಿ ಅಭ್ಯರ್ಥಿಗಳು ಪಡೆದಿರುವ ಅಂಕಗಳನ್ನು ಪರಿಗಣಿಸಿ, ನೇರ ನೇಮಕಾತಿಗೆ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ. ನೇಮಕಾತಿ ಪ್ರಕ್ರಿಯೆಯಲ್ಲಿ ನೇರ ಸಂದರ್ಶನ, ಲಿಖಿತ ಪರೀಕ್ಷೆಗಳು ಇರುವುದಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಆದ್ದರಿಂದ ಅಭ್ಯರ್ಥಿಗಳು ಜಿಲ್ಲಾಧಿಕಾರಿ ಕಚೇರಿಯ ಅಧಿಕೃತ ವೆಬ್‌ಸೈಟ್  www.udupi.nic.in ಮೂಲಕ ಆನ್‌ಲೈನ್ ಅರ್ಜಿಯನ್ನು ಸಲ್ಲಿಸಬೇಕು ಹಾಗೂ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆಯುವುದರಿಂದ ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳ ಆಮಿಷಕ್ಕೆ ಒಳಗಾಗಬಾರದು ಎಂದು ಅವರು ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News