ಅಳಪೆ ರಸ್ತೆ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಶಿಲಾನ್ಯಾಸ

Update: 2019-12-12 14:19 GMT

ಮಂಗಳೂರು, ಡಿ.12: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಅಳಪೆ ದಕ್ಷಿಣ ವಾರ್ಡ್‌ನಲ್ಲಿ ನೂತನ ಕಾಮಗಾರಿಗೆ ಶಾಸಕ ಡಿ.ವೇದವ್ಯಾಸ್ ಕಾಮತ್ ಗುರುವಾರ ಶಿಲಾನ್ಯಾಸ ನೆರವೇರಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ಅಳಪೆ ಹೇಮಾವತಿ ನಗರದಿಂದ ಪರಂಜ್ಯೋತಿ ಭಜನಾ ಮಂದಿರಕ್ಕೆ ತೆರಳುವ ರಸ್ತೆಗೆ 15 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದ್ದೇವೆ. ಕೆಲವು ತಿಂಗಳ ಹಿಂದೆ ಈ ಪ್ರದೇಶದ ಸಾರ್ವಜನಿಕರು ರಸ್ತೆ ಕಾಮಗಾರಿ ನಡೆಸಿಕೊಡುವಂತೆ ಮನವಿ ಸಲ್ಲಿಸಿದ್ದರು. ಆ ಪ್ರಕಾರ ಕಾಮಕಾರಿಯನ್ನು ಕೈಗೆತ್ತಿಕೊಂಡಿದ್ದು ಶೀಘ್ರವೇ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.

ಅಳಪೆ ದಕ್ಷಿಣ ವಾರ್ಡ್‌ನಲ್ಲಿ ಅನೇಕ ಕಾಮಗಾರಿಗಳಿಗೆ ಯೋಜನೆ ರೂಪಿಸಿದ್ದು, ಮುಂದಿನ ದಿನಗಳಲ್ಲಿ ಅವೆಲ್ಲವನ್ನೂ ಕೂಡ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಂದರ್ಭ ಪಾಲಿಕೆ ಸದಸ್ಯರಾದ ಶೋಭಾ ಪೂಜಾರಿ ಹಾಗೂ ದಿವಾಕರ್ ಪಾಂಡೇಶ್ವರ, ಮಾಜಿ ಸದಸ್ಯ ವಿಜಯ್‌ಕುಮಾರ್ ಶೆಟ್ಟಿ, ಬಿಜೆಪಿ ಮುಖಂಡರಾದ ಭಾಸ್ಕರ್ ಚಂದ್ರ ಶೆಟ್ಟಿ, ವಸಂತ್ ಜೆ. ಪೂಜಾರಿ,ಸುಕೇಶ್‌ಕುಮಾರ್, ಮಾನಸ ರೈ, ಧರ್ಮಪಾಲ್, ಲತಾ, ದೀಪಕ್, ಸುಜಿತ್ ಕುಮಾರ್, ಪದ್ಮಾ, ದಿನೇಶ್ ಶೆಟ್ಟಿ, ನವೀನ್ ಚಂದ್ರ, ಪ್ರಮೋದ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News