ಡಿ.13: ಸುರತ್ಕಲ್‌ನಲ್ಲಿ ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

Update: 2019-12-19 05:36 GMT

ಮಂಗಳೂರು, ಡಿ.12: ಎಸ್‌ಡಿಪಿಐ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಡಿ.13ರಂದು ಸಂಜೆ 4:15ಕ್ಕೆ ಸುರತ್ಕಲ್ ಜಂಕ್ಷನ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ.

ವ್ಯಾಪಕ ವಿರೋಧದ ಹೊರತಾಗಿಯೂ ಕೇಂದ್ರ ಸರಕಾರವು ಜಾರಿಗೆ ತಂದಿರುವ ಪೌರತ್ವ ನೀತಿಯು ಮುಸ್ಲಿಂ ಮತ್ತು ಅಲ್ಪಸಂಖ್ಯಾತರು ಸೇರಿದಂತೆ ನಾಗರಿಕರ ಹಕ್ಕುಗಳನ್ನು ಗುರಿಯಾಗಿರಿಸಿ ಜಾರಿಗೆ ತಂದಿರುವ ಅಸಂವಿಧಾನಕ ನೀತಿಯಾಗಿದೆ. ಅದನ್ನು ಅತೀ ಶೀಘ್ರವಾಗಿ ಕೈಬಿಡಬೇಕೆಂಬ ನೆಲೆಯಲ್ಲಿ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಬೃಹತ್ ಸಂಖ್ಯೆಯಲ್ಲಿ ಜನರು ಪಕ್ಷಭೇದ ಮರೆತು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಎಸ್‌ಡಿಪಿಐ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಅಝರ್ ಚೊಕ್ಕಬೆಟ್ಟು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News