ಪೋಷಕರನ್ನು ಕರೆದುಕೊಂಡು ಬರಲು ಹೇಳಿದ್ದಕ್ಕೆ 7ನೆ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

Update: 2019-12-12 14:30 GMT

ಬೆಂಗಳೂರು, ಡಿ.12: ಏಳನೆ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ದೊಮ್ಮಲೂರಿನಲ್ಲಿ ನಡೆದಿದೆ.

ದೊಮ್ಮಲೂರಿನ ಕೆಆರ್‌ಎಲ್‌ಎಸ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವೇಣುಗೋಪಾಲ್(13) ಮೃತ ವಿದ್ಯಾರ್ಥಿ ಎಂದು ತಿಳಿದುಬಂದಿದೆ.

ಇತ್ತೀಚಿಗೆ ಸಹಪಾಠಿಗಳ ನಡುವೆ ಗಲಾಟೆ ನಡೆದ ಸಂದರ್ಭದಲ್ಲಿ ಸಹಪಾಠಿಯೊಬ್ಬನಿಗೆ ವೇಣುಗೋಪಾಲ್ ಚಾಕು ಹಿಡಿದು ಬೆದರಿಸಿದ್ದ ಎನ್ನಲಾಗಿದ್ದು, ಇದನ್ನು ನೋಡಿದ ಶಿಕ್ಷಕರು ಬೆದರಿಸಿ ಶಾಲೆಗೆ ಪೋಷಕರನ್ನು ಕರೆದುಕೊಂಡು ಬರಬೇಕು ಎಂದು ಸೂಚಿಸಿದ್ದರು ಎಂದು ಹೇಳಲಾಗುತ್ತಿದೆ.

ಇದರಿಂದ ಹೆದರಿದ ವೇಣುಗೋಪಾಲ್ ಮನೆಗೆ ಹೋಗಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹಲಸೂರು ಠಾಣಾ ಪೊಲೀಸರು ಮಾಹಿತಿ ನೀಡಿದ್ದಾರೆ. ಶಾಲೆ ಆಡಳಿತ ಮಂಡಳಿ ಅವರ ಕಿರುಕುಳದಿಂದಾಗಿಯೇ ಸಾವನ್ನಪ್ಪಿರುವುದಾಗಿ ಪೋಷಕರು ಆರೋಪ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News