ಉಪ್ಪಿನಂಗಡಿ: ಕಾರು ಢಿಕ್ಕಿ; ವೃದ್ಧ ಸಾವು

Update: 2019-12-12 14:57 GMT

ಉಪ್ಪಿನಂಗಡಿ: ಮೂತ್ರವಿಸರ್ಜನೆಗೆಂದು ಬಸ್‍ನಿಂದ ಇಳಿದ ವೃದ್ಧರೋರ್ವರು ಕಾರು ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ಗುರುವಾರ ನಸುಕಿನ ವೇಳೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಗ್ರಾಮದ ಪುಲ್ಲೊಟ್ಟೆ ಎಂಬಲ್ಲಿ ಸಂಭವಿಸಿದೆ.

ಬೆಂಗಳೂರು ನಿವಾಸಿಯಾಗಿರುವ ಸೂರ್ಯನಾರಾಯಣ ರಾವ್ (82) ಎಂಬವರು ಮೃತ ವ್ಯಕ್ತಿ. ಬೆಂಗಳೂರಿನಿಂದ ಕಾರ್ಯನಿಮಿತ್ತ ಕುಂದಾಪುರಕ್ಕೆ ಖಾಸಗಿ ಬಸ್ಸಿನಲ್ಲಿ ಸಂಚರಿಸುತ್ತಿದ್ದ ಅವರು ಶಿರಾಡಿ ಗ್ರಾಮದಲ್ಲಿ ಬಸ್‍ನಿಂದ ಇಳಿಯುತ್ತಿದ್ದಂತೆಯೇ, ಈ ಸಂದರ್ಭ ಬೆಂಗಳೂರು ಕಡೆಯಿಂದ ವೇಗವಾಗಿ ಬಂದ ಕಾರು ಅವರಿಗೆ ಢಿಕ್ಕಿ ಹೊಡೆದಿದೆ. ಈ ವೇಳೆ ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. 

ಈ ಪ್ರಕರಣಕ್ಕೆ ಸಂಬಂಧಿಸಿ ಬಸ್ಸನ್ನು ರಸ್ತೆಯ ವಿರುದ್ಧ ದಿಕ್ಕಿನಲ್ಲಿ ನಿಲ್ಲಿಸಿದ ಬಸ್ ಚಾಲಕನ ವಿರುದ್ಧ ಹಾಗೂ ಅತೀ ವೇಗದಿಂದ ವಾಹನ ಚಲಾಯಿಸಿದ ಕಾರು ಚಾಲಕನ ಮೇಲೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News