ಕಾಂಗ್ರೆಸ್ ಮುಖಂಡ ಕಮಲಾಕ್ಷ ಪೂಜಾರಿ ನಿಧನ

Update: 2019-12-12 15:47 GMT

ಮಣಿಪಾಲ, ಡಿ.12: ಮಣಿಪಾಲ ಸರಳೇಬೆಟ್ಟುವಿನ ವಿಜಯನಗರ ನಿವಾಸಿ, ಕಾಂಗ್ರೆಸ್ ಮುಖಂಡ ಕಮಲಾಕ್ಷ ಪೂಜಾರಿ(60) ಹೃದಯಾಘಾತದಿಂದ ಡಿ.12ರಂದು ಬೆಳಗ್ಗೆ ನಿಧನರಾದರು.

ಮೃತರು ರಿಕ್ಷಾಚಾಲಕರಾಗಿದ್ದು, ಇಂದು ಶಾಲಾ ಮಕ್ಕಳನ್ನು ರಿಕ್ಷಾದಲ್ಲಿ ಮಣಿಪಾಲದ ಮಾಧವ ಕೃಪಾ ಶಾಲೆಯಲ್ಲಿ ಬಿಟ್ಟು, ಅಲ್ಲಿಂದ ಬಾಡಿಗೆಗೆ ಹೊರಡುವ ವೇಳೆ ರಿಕ್ಷಾದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟರು.

ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಇವರು ಸರಳೇಬೆಟ್ಟು ವಾರ್ಡಿನ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದರು. ಇವರ ನಿಧನಕ್ಕೆ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಯು.ಆರ್.ಸಭಾಪತಿ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕರೆ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ನರಸಿಂಹ ಮೂರ್ತಿ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಕೆ.ಜನಾರ್ದನ ಭಂಡಾರ್ಕಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News