ನ್ಯಾಯಾಲಯಗಳಿಗೆ ನಾಲ್ಕನೆ ಶನಿವಾರದ ರಜೆ ರದ್ದು
Update: 2019-12-12 15:40 GMT
ಬೆಂಗಳೂರು, ಡಿ. 12: ರಾಜ್ಯದ ಎಲ್ಲ ಅಧೀನ ನ್ಯಾಯಾಲಯಗಳು ಮತ್ತು ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳು, ಪ್ರಾಸಿಕ್ಯೂಟರ್, ಸರಕಾರಿ ವಕೀಲರು ಹಾಗೂ ನ್ಯಾಯಾಲಯ ಪ್ರಕರಣಗಳಿಗೆ ನಾಲ್ಕನೆ ಶನಿವಾರದ ಸಾರ್ವತ್ರಿಕ ರಜೆ ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ.
2019ರ ಜೂನ್ 13ರಂದು ಪ್ರತಿ ತಿಂಗಳ ನಾಲ್ಕನೆ ಶನಿವಾರ ಸಾರ್ವತ್ರಿಕ ರಜೆ ಘೋಷಿಸಲಾಗಿತ್ತು. ಇದೀಗ ಆ ಆದೇಶವನ್ನು ಮಾರ್ಪಡಿಸಲಾಗಿದೆ ಎಂದು ತಿಳಿಸಲಾಗಿದೆ.