ರಸ್ತೆ ಅಪಘಾತ: ಸಾಹಿತಿ ಕೋಟೇಶ್ವರ ಸೂರ್ಯನಾರಾಯಣ ರಾವ್ ಮೃತ್ಯು
Update: 2019-12-12 16:40 GMT
ಕುಂದಾಪುರ, ಡಿ.12: ಕೋಟೇಶ್ವರದ ಕೊಡಿ ಹಬ್ಬಕ್ಕೆ ಬೆಂಗಳೂರಿನಿಂದ ಬರುತ್ತಿದ್ದಾಗ ಸಾಹಿತಿ ಕೋಟೇಶ್ವರ ಸೂರ್ಯನಾರಾಯಣ ರಾವ್(80) ಇಂದು ಗುಂಡ್ಯಾ ಬಳಿ ನಡೆದ ರಸ್ತೆ ಅಫಘಾತದಲ್ಲಿ ಮೃತಪಟ್ಟಿದ್ದಾರೆ.
ಕೋಟೇಶ್ವರ ಮೂಲದ ಇವರು, ಬೆಂಗಳೂರಿನ ಬಸವನಗುಡಿಯ ಡಿ.ವಿ.ಜಿ. ರಸ್ತೆಯಲ್ಲಿ ಮಹಾಲಕ್ಷ್ಮಿ ಸ್ಟೋರ್ಸ್ ಮಳಿಗೆ ನಡೆಸುತ್ತಿದ್ದರು. ಹಿರಿಯ ಸಾಹಿತಿ, ಪತ್ರಿಕಾ ಬರಹಗಾರರಾಗಿದ್ದ ಇವರು, ಹತ್ತು ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಇವರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.