ಮೈಸೂರು: ವಿದ್ಯುತ್ ಸ್ಪರ್ಶಿಸಿ ಚಿರತೆ ಸಾವು

Update: 2019-12-12 18:13 GMT

ಮೈಸೂರು,ಡಿ.12: ಆಹಾರ ಅರಸಿ ನಾಡಿಗೆ ಬಂದಿದ್ದ 4 ವರ್ಷದ ಹೆಣ್ಣು ಚಿರತೆಗೆ ವಿದ್ಯುತ್ ಸ್ಪರ್ಶಿಸಿದ ಪರಿಣಾಮ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಜಿಯಾರ ಗ್ರಾಮದ ಬಳಿ ನಡೆದಿದೆ.

ಜಿಯಾರ ಗ್ರಾಮ ಪಂಚಾಯತ್ ಗೆ ಸೇರಿದ ಕುಡಿಯುವ ನೀರಿನ ಪಂಪ್ ಸೆಟ್‍ಗೆ ಸಂಪರ್ಕ ಕಲ್ಪಿಸಿದ್ದ ವಿದ್ಯುತ್ ತಗಲಿ ಈ ದುರ್ಘಟನೆ ನಡೆದಿದೆ.

ವಿದ್ಯುತ್ ತಂತಿಯನ್ನು ಬಾಯಲ್ಲಿ ಕಚ್ಚಿಕೊಂಡ ರೀತಿಯಲ್ಲೇ ಚಿರತೆಯ ಮೃತದೇಹ ಪತ್ತೆಯಾಗಿದೆ. ಚಿರತೆಯು ರಾಷ್ಟ್ರೀಯ ಉದ್ಯಾನವನ ನಾಗರಹೊಳೆಯಿಂದ ಆಹಾರ ಹುಡುಕಿಕೊಂಡು ನಾಡಿಗೆ ಬಂದಿತ್ತು ಎನ್ನಲಾಗಿದೆ. ಈ ಸಂಬಂದ ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News