ವಿಕಾಸ ಪದವಿ ಪೂರ್ವ ಕಾಲೇಜಿನಲ್ಲಿ ದೀಪೋತ್ಸವ

Update: 2019-12-13 06:55 GMT

ಮಂಗಳೂರು, ಡಿ.13: ನಗರದ ವಿಕಾಸ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ‘ದೀಪೋತ್ಸವ’ ಕಾರ್ಯಕ್ರಮವನ್ನು ಆಚರಿಸಲಾಯಿತು.

ನೂರಕ್ಕೂ ಹೆಚ್ಚು ದೀಪಗಳನ್ನು ವಿದ್ಯಾರ್ಥಿಗಳು ಬೆಳಗಿಸುವುದರ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರಿಂದ ಸಂಗೀತ, ನೃತ್ಯ ಹಾಗೂ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ವಿಕಾಸ್ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಜೆ.ಕೊರಗಪ್ಪ, ಸಮನ್ವಯಾಧಿಕಾರಿ ಪಾರ್ಥಸಾರಥಿ ಜೆ . ಪಾಲೆಮಾರ್, ಡೀನ್ ಡಾ ಮಂಜುಳಾ ರಾವ್, ಶೈಕ್ಷಣಿಕ ನಿರ್ದೇಶಕ ಪ್ರೊ.ಟಿ.ರಾಜರಾಮ್ ರಾವ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಸುನೀಲ್ ಬಿ.ಎಂ., ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಐಶ್ವರ್ಯಾ ಕೆ. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕನ್ನಡ ಉಪನ್ಯಾಸಕ ಅಜಿತ್ ರೈ ಕಾರ್ಯಕ್ರಮ ಸಂಯೋಜಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News