ಮೂರ್ತೆದಾರರ ಸೇವಾ ಸಹಕಾರಿ ಸಂಘ: ಫಜೀರು ಶಾಖೆಯ ಉದ್ಘಾಟನಾ ಸಮಾರಂಭ

Update: 2019-12-13 11:14 GMT

ಬಂಟ್ವಾಳ, ಡಿ. 13: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ ನೂತನ ಫಜೀರು ಶಾಖೆಯ ಉದ್ಘಾಟನಾ ಸಮಾರಂಭ ಫಜೀರುವಿನ ಸಚಿನ್ ಪೂವ ಪೂಜಾರಿ ಕಾಂಪ್ಲೆಕ್ಸ್‍ನಲ್ಲಿ ಉದ್ಘಾಟನೆಗೊಂಡಿತು.

ಮಾಜಿ ಅರಣ್ಯ ಸಚಿವ ಬಿ.ರಮನಾಥ ರೈ ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿ, ಮೂರ್ತೆದಾರರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಮೂರ್ತೆದಾರರ ಸಹಕಾರಿ ಸಂಘ ನೆರವಾಗಿದೆ. ಸಂಘ ಹೊಸ ಶಾಖೆಗಳ ನಿರ್ಮಾಣದ ಮೂಲಕ ಗ್ರಾಮೀಣ ಜನರಿಗೆ ಆರ್ಥಿಕ ಸಹಾಯವನ್ನು ನೀಡುತ್ತಾ ಬರುತ್ತಿದೆ. ಶೇ. 25 ಡಿವಿಡೆಂಡನ್ನು ನೀಡುವ ಮೂಲಕ ಸಂಘದ ಸದಸ್ಯರಿಗೆ ಶಕ್ತಿ ನೀಡುತ್ತಿದೆ ಎಂದರು. 
ಬಿಲ್ಲವ ಮಹಾಮಂಡಲದ ಅಧ್ಯಕ್ಷ ರಾಜಶೇಖರ ಕೋಟ್ಯಾನ್ ದೀಪ ಬೆಳಗಿದರು. 

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಬೊಳ್ಳಾಯಿ ಅಧ್ಯಕ್ಷತೆ ವಹಿಸಿ ಮಾತನಾಡಿ ಬೊಳ್ಳಾಯಿಯಲ್ಲಿ ಪ್ರಧಾನ ಶಾಖೆಯನ್ನು ಹೊಂದಿರುವ ನಮ್ಮ ಸಂಘ 3 ಶಾಖೆಗಳನ್ನು ಆರಂಭಿಸಿದೆ. ಮೂರ್ತೆದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಎಲ್ಲಾ ಗ್ರಾಮಗಳಲ್ಲೂ ಶಾಖೆ ತೆರೆಯುವ ಚಿಂತನೆ ಇದೆ ಎಂದರು. 

ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ. ಸೇಸಪ್ಪ ಕೋಟ್ಯನ್ ಭದ್ರತಾ ಕೋಶ ಉದ್ಘಾಟಿಸಿದರು. ಬಿಲ್ಲವ ಮಹಾಮಂಡಲದ ಅಧ್ಯಕ್ಷ ರಾಜಶೇಖರ ಕೋಟ್ಯಾನ್ ಠೇವಣಿ ಪತ್ರ ಹಸ್ತಾಂತರಿಸಿದರು. 

ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಮಮತಾ ಗಟ್ಟಿ, ಉಪ್ಪಿನಂಗಡಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷೆ ಉಷಾ ಅಂಚನ್, ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಸದಸ್ಯ ನವೀನ್ ಪೂಜಾರಿ, ಬಂಟ್ವಾಳ ಸಹಕಾರಿ ಸೊಸೈಟಿಯ ಉಪಾಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಕಾರ್ಯನಿರ್ವಾಹಣಾಧಿಕಾರಿ ಬೇಬಿ ಕುಂದರ್, ತಾಪಂ ಮಾಜಿ  ಸದಸ್ಯ ಉಮ್ಮರ್ ಫಜೀರು, ಪ್ರಮುಖರಾದ ಸೇಸಪ್ಪ ಪೂಜಾರಿ, ಕಟ್ಟಡದ ಮಾಲೀಕ ವಿಜೇತ್ ಪೂಜಾರಿ, ಪಜೀರು ಪಂ.ಅಧ್ಯಕ್ಷ  ಸೀತರಾಮ ಶೆಟ್ಟಿ ನ್ಯಾಯವಾದಿ ಅಶ್ವನಿ ಕುಮಾರ್ ರೈ ಉಪಸ್ಥಿತರಿದ್ದರು.

ಆಡಳಿತ ಮಂಡಳಿ ಉಪಾದ್ಯಕ್ಷ ಸುಂದರ ಪೂಜಾರಿ, ನಿರ್ದೇಶಕರಾದ ವಾಸುದೇವ ಪೂಜಾರಿ ಪೆರ್ವ, ರಮೇಶ್ ಅನ್ನಪ್ಪಾಡಿ, ವಿಒಠಲ ಬೆಳ್ಚಾಡ, ಟಿ.ಮುತ್ತಪ್ಪ ಪೂಜಾರಿ ಕೊಲ್ಯ., ಅಶೋಕ್  ಪೂಜಾರಿ ಕೋಮಾಲಿ, ಸುಜಾತ ಎಂ.,  ವಾಣಿ ವಸಂತ, ಕಾರ್ಯನಿರ್ವಾಹಣಾಧಿಕಾರಿ ಮಮತಾ ಜಿ., ಶಾಖಾ ವ್ಯವಸ್ಥಾಪಕಿ ಅಶ್ವಿತಾ ಹಾಜರಿದ್ದರು.

ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಸ್ವಾಗತಿಸಿ, ಪ್ರಸ್ತಾವಿಸಿದರು. ನಿರ್ದೇಶಕ ರಮೇಶ್ ಅನ್ನಪ್ಪಾಡಿ ವಂದಿಸಿದರು. ಪತ್ರಕರ್ತ ಗೋಪಾಲ ಅಂಚನ್ ಕಾರ್ಯಕ್ರಮ ನಿರೂಪಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News