ಮಂಗಳೂರು: ಡಿ.16ರಂದು ವಿವಿ ಕಾಲೇಜಿನಲ್ಲಿ ಅರಿವು ಕಾರ್ಯಕ್ರಮ

Update: 2019-12-13 11:28 GMT

ಮಂಗಳೂರು, ಡಿ.13: ಕರ್ನಾಟಕ ಸರಕಾರದ ಯುವ ಸಬಲೀಕರಣ, ಕ್ರೀಡಾ ಇಲಾಖೆ, ಯುವಸ್ಪಂದನ ಕೇಂದ್ರ, ನಿಮಾನ್ಸ್ ಬೆಂಗಳೂರು ಸಹಯೋಗದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಹಂಪನಕಟ್ಟಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮ ಬೆಳಗ್ಗೆ 11:30ಕ್ಕೆ ನಡೆಯಲಿದೆ.

ಕಾರ್ಯಕ್ರಮವನ್ನು ಯುವಸಬಲೀಕರಣ, ಕ್ರೀಡಾ ಇಲಾಖೆ ಉಪನಿರ್ದೇಶಕ ಪ್ರದೀಪ ಡಿಸೋಜ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಭಾರತ್ ಸ್ಕೌಟ್ಸ್ ಗೈಡ್ಸ್ನ ರಾಷ್ಟ್ರೀಯ ತರಬೇತುದಾರ ಪ್ರತೀಮ್ ಕುಮಾರ್ ವಿಶೇಷ ಉಪನ್ಯಾಸ ನೀಡಲಿದ್ದಾರೆ.

ವಿಶ್ವವಿದ್ಯಾನಿಲಯ ಕಾಲೇಜು ಪ್ರಾಂಶುಪಾಲ ಡಾ.ಉದಯಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಯುವ ಸ್ಪಂದನ ಕೇಂದ್ರದ ಕಾರ್ಯಕ್ರಮ ಸಂಯೋಜಕ ಡೊಂಬಯ್ಯ ಇಡ್ಕಿದು, ಯುವ ಸಮಾಲೋಚಕ ಆದಶ್ ಶೆಟ್ಟಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News