ಪೌರತ್ವ ಕಾಯ್ದೆ ವಿರುದ್ಧ ಭಾರೀ ಪ್ರತಿಭಟನೆ: ಅಮಿತ್ ಶಾ ಮೇಘಾಲಯ, ಅರುಣಾಚಲ ಪ್ರದೇಶ ಭೇಟಿ ರದ್ದು

Update: 2019-12-19 06:10 GMT

ಹೊಸದಿಲ್ಲಿ: ಪೌರತ್ವ ಕಾಯ್ದೆಯ ವಿರುದ್ಧ ಅಸ್ಸಾಂ ಮತ್ತು ಮೇಘಾಲಯದಾದ್ಯಂತ ಭಾರೀ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ರವಿವಾರ ಮತ್ತು ಸೋಮವಾರಕ್ಕೆ ನಿಗದಿಯಾಗಿದ್ದ ಮೇಘಾಲಯ, ಅರುಣಾಚಲ ಪ್ರದೇಶಗಳ ಭೇಟಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ರದ್ದುಗೊಳಿಸಿದ್ದಾರೆ ಎಂದು ವರದಿಯಾಗಿದೆ.

ಅಸ್ಸಾಂನ ದಿಬ್ರುಘರ್ ನಲ್ಲಿ ಹೇರಲಾಗಿದ್ದ ಕರ್ಫ್ಯೂವನ್ನು ಶುಕ್ರವಾರ 5 ಗಂಟೆಗಳ ಕಾಲ ಹಿಂಪಡೆಯಲಾಗಿತ್ತು. "ನಾವು ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ನಮ್ಮ ಪ್ರತಿಭಟನೆ ಮುಂದುವರಿಯುತ್ತದೆ" ಎಂದು ಪ್ರತಿಭಟನೆಯ ನೇತೃತ್ವ ವಹಿಸಿರುವ ಎಎಎಸ್ ಯು ಮುಖ್ಯಸ್ಥ ಸಮುಜ್ಜಲ್ ಭಟ್ಟಾಚಾರ್ಯ ತಿಳಿಸಿದ್ದಾರೆ.

ಮೇಘಾಲಯ ಭೇಟಿ ರದ್ದಾದ ಹಿನ್ನೆಲೆಯಲ್ಲಿ ಅಮಿತ್ ಶಾ ಶನಿವಾರ ಜಾರ್ಖಂಡ್ ಗೆ ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News