ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2019-12-13 16:54 GMT

ಬೈಂದೂರು, ಡಿ.13: ವೈಯಕ್ತಿಕ ಕಾರಣದಿಂದ ಮನನೊಂದ ಕಿರಿಮಂಜೇಶ್ವರ ಗ್ರಾಮದ ಮಕ್ಕಿಮನೆ ನಾಗೂರು ನಿವಾಸಿ ಗೋವಿಂದ ದೇವಾಡಿಗ(72) ಎಂಬ ವರು ಡಿ.12ರಂದು ರಾತ್ರಿ ವೇಳೆ ಮನೆಯ ಪಕ್ಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿರ್ವ: ನಿಟ್ಟೆ ಪರಪಾಡಿಯ ನಿವಾಸಿ ಹರೀಶ್(33) ಎಂಬವರು ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಡಿ.11ರಂದು ರಾತ್ರಿ ಸೊರ್ಕಳ ದಲ್ಲಿರುವ ಬಾಡಿಗೆ ಮನೆಯಲ್ಲಿ ಮಾಡಿನ ಕಬ್ಬಿಣದ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News