ಸಿದ್ದರಾಮಯ್ಯ ರಾಜಿನಾಮೆ ಹಿಂಪಡೆಯಲು ಅಭಯಚಂದ್ರ ಆಗ್ರಹ

Update: 2019-12-13 18:19 GMT

ಮೂಡುಬಿದಿರೆ: ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವೈಫಲ್ಯದ ಹಿನ್ನಲೆಯಲ್ಲಿ ಹೊಣೆ ಹೊತ್ತು ಶಾಸಕಾಂಗ ಪಕ್ಷದ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ದಿನೇಶ್ ಗುಂಡೂರಾವ್ ಅವರು ರಾಜಿನಾಮೆಯನ್ನು ಹಿಂಪಡೆಯುವಂತೆ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಆಗ್ರಹಿಸಿದ್ದಾರೆ. 

ಬಿಜೆಪಿಗೆ ತಾತ್ಕಾಲಿಕ ಗೆಲುವು ಸಿಕ್ಕಿದೆ, ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವಲ್ಲಿ ನಾವೆಲ್ಲರೂ ಜೊತೆಗಿದ್ದೇವೆ. ರಾಜ್ಯದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಜನಪ್ರತಿನಿಧಿಗಳ ಅಭಿಪ್ರಾಯಕ್ಕೆ ಸಿದ್ಧರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಮಾನ್ಯತೆ ನೀಡಿ ರಾಜೀನಮೆ ಹಿಂಪಡೆಯಬೇಕು . ಮುಂದಿನ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಗೆ ಪಕ್ಷಕ್ಕೆ ಅವರ ನಾಯಕತ್ವದ ಅಗತ್ಯವಿದೆ. ಎಂದು ಅಭಯಚಂದ್ರ ಅವರು ಪಕ್ಷದ ಕ್ಷೇತ್ರಾಧ್ಯಕ್ಷ ವಲೇರಿಯನ್ ಸಿಕ್ವೇರಾ ಜಂಟಿಯಾಗಿ ಸಿದ್ದರಾಮಯ್ಯ ಅವರಿಗೆ ಪತ್ರಮೂಲಕ ಒತ್ತಾಯಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News