ಮೆಟ್ಟಿಲುಗಳನ್ನು ಹತ್ತುವಾಗ ಎಡವಿಬಿದ್ದ ಪ್ರಧಾನಿ ಮೋದಿ: ವಿಡಿಯೋ ವೈರಲ್

Update: 2019-12-14 17:17 GMT

ಹೊಸದಿಲ್ಲಿ, ಡಿ.14: ಪ್ರಧಾನಿ ನರೇಂದ್ರ ಮೋದಿ ಕಾನ್‌ಪುರದ ಗಂಗಾಘಾಟ್ ನಲ್ಲಿ ಮೆಟ್ಟಲುಗಳನ್ನು ಹತ್ತುತ್ತಿದ್ದಾಗ ಮುಗ್ಗರಿಸಿ ಬಿದ್ದ ಘಟನೆ ಶನಿವಾರ ನಡೆದಿದೆ. ಅವರ ಜೊತೆಗಿದ್ದ ಭದ್ರತಾ ಅಧಿಕಾರಿಗಳು ಕೂಡಲೇ ಕೈಹಿಡಿದು ಎಬ್ಬಿಸಿದ್ದಾರೆ. ಘಟನೆಯಲ್ಲಿ ಪ್ರಧಾನಿಯವರಿಗೆ ಯಾವುದೇ ಗಾಯಗಳಾಗಿಲ್ಲವೆಂದು ತಿಳಿದುಬಂದಿದೆ.

ಮೋದಿಯವರು ರಾಷ್ಟ್ರೀಯ ಗಂಗಾ ಮಂಡಳಿಯ ಪ್ರಥಮ ಸಭೆಯಲ್ಲಿ ಪಾಲ್ಗೊಳ್ಳಲು ಶನಿವಾರ ಬೆಳಗ್ಗೆ ಕಾನ್ಪುರಕ್ಕೆ ಆಗಮಿಸಿದ್ದರು. ಗಂಗಾನದಿಯ ಶುದ್ಧೀಕರಣ ಯೋಜನೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆಯನ್ನು ಅವರು ವಹಿಸಿದ್ದರು. ಕೇಂದ್ರ ಅರಣ್ಯ ಹಾಗೂ ಪರಿಸರ ಸಚಿವ ಪ್ರಕಾಶ್ ಜಾವ್ಡೇಕರ್ ಸೇರಿದಂತೆ ಕೇಂದ್ರ ಸಂಪುಟ ಸದಸ್ಯರು, ಉತ್ತರಪ್ರದೇಶ, ಉತ್ತರಖಂಡ ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಚಂದ್ರಶೇಖರ್ ಆಝಾದ್ ಕೃಷಿ ವಿಶ್ವವಿದ್ಯಾನಿಯದ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಪ್ರಧಾನಿಯವರನ್ನು ಮುಖ್ಯಮಂತ್ರಿ ಆದಿತ್ಯನಾಥ್ ಹಾಗೂ ಇತರ ಗಣ್ಯರು ಬರಮಾಡಿಕೊಂಡಿದ್ದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News