ರಮೇಶ್ ಕುಮಾರ್ ಭೇಟಿ ಬಗ್ಗೆ ಶರತ್ ಬಚ್ಚೇಗೌಡ ಸ್ಪಷ್ಟನೆ

Update: 2019-12-14 14:07 GMT

ಬೆಂಗಳೂರು, ಡಿ.14: ಸದ್ಯಕ್ಕೆ ಯಾವುದೇ ಪಕ್ಷಕ್ಕೂ ಸೇರುವ ಆಸಕ್ತಿ, ಆತುರ ನನಗಿಲ್ಲ ಎಂದು ಹೊಸಕೋಟೆ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.

ಹೊಸಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗ ಯಾವುದೇ ಪಕ್ಷಕ್ಕೂ ಸೇರ್ಪಡೆಯಾಗಲ್ಲ. ಮಾಜಿ ಸ್ಪೀಕರ್ ರಮೇಶ್ ಕುಮಾರ್‌ರನ್ನು ಭೇಟಿಯಾಗಿದ್ದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ತಿಳಿಸಿದರು.

ರಮೇಶ್ ಕುಮಾರ್ ಹಾಗೂ ನಮ್ಮ ಕುಟುಂಬದ ನಡುವೆ ಮೊದಲಿನಿಂದಲೂ ಒಡನಾಟವಿದೆ. ಅವರು ನಮ್ಮ ಆಪ್ತರು. ನನಗೆ ತಂದೆ ಸಮಾನ. ಹೀಗಾಗಿ, ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ. ಅವರು ವಿಧಾನಸಭೆಯಲ್ಲಿ ಹೇಗೆ ನಡೆದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ ಎಂದರು.

ಮಾಜಿ ಸಚಿವ ಕೃಷ್ಣಭೈರೇಗೌಡ ಹಾಗೂ ಡಿ.ಕೆ.ಶಿವಕುಮಾರ್‌ರನ್ನು ನಾನು ನೇರವಾಗಿ ಭೇಟಿಯಾಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಮುಖ್ಯಮಂತ್ರಿ ಯಡಿಯೂರಪ್ಪರನ್ನು ಸದ್ಯದಲ್ಲಿಯೇ ಭೇಟಿ ಮಾಡುವೆ. ಅವರಿಂದಲೂ ಸೂಕ್ತ ಸಲಹೆ, ಮಾರ್ಗದರ್ಶನ ಪಡೆಯುತ್ತೇನೆ ಎಂದು ಅವರು ವಿವರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News