ಬೆಂಗಳೂರು: ಪ್ರತ್ಯೇಕ ರಸ್ತೆ ಅಪಘಾತಕ್ಕೆ ಇಬ್ಬರು ಬಲಿ

Update: 2019-12-14 14:10 GMT

ಬೆಂಗಳೂರು, ಡಿ.14: ಅಪರಿಚಿತ ವಾಹನ ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಚಿಕ್ಕಜಾಲದ ಜೈಪುರ ಕಾಲನಿ ಬಳಿ ನಡೆಸಿದೆ.

ಚಿಕ್ಕಜಾಲದ ಶಂಕರ್(51) ಮೃತ ವ್ಯಕ್ತಿಯಾಗಿದ್ದಾನೆ. ಕೆಲಸಕ್ಕಾಗಿ ಜೈಪುರ್ ಕಾಲನಿ ಬಳಿ ನಡೆದುಕೊಂಡು ಹೊಗುತ್ತಿದ್ದಾಗ ಅಪರಿಚಿತ ವಾಹನ ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ತೀವ್ರ ಗಾಯಗೊಂಡ ಅವರನ್ನು ಚಿಕಿತ್ಸೆಗಾಗಿ ಯಲಹಂಕದ ಕೆ.ಕೆ.ಆಸ್ಪತ್ರೆಗೆ ದಾಖಲಿಸಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಕುರಿತು ಚಿಕ್ಕಜಾಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾದಚಾರಿ ಸಾವು: ವೇಗವಾಗಿ ಬಂದ ಬೈಕ್ ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಎಂಜಿ ರಸ್ತೆಯ ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ.

ತ್ರಿಪುರಾ ಮೂಲದ ಹಲಸೂರಿನ ಚಂದ್ರಮಲಾನಿ(30) ಮೃತಪಟ್ಟ ವ್ಯಕ್ತಿ. ಇವರು ಚರ್ಚ್ ಸ್ಟ್ರೀಟ್ ಹೊಟೇಲ್‌ವೊಂದರಲ್ಲಿ ಅಡುಗೆ ಭಟ್ಟನಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾತ್ರಿ 7.30ರ ಸುಮಾರಿಗೆ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿರುವಾಗ ಅಪಘಾತ ಸಂಭವಿಸಿದೆ. ವೇಗವಾಗಿ ಬಂದು ಅಪಘಾತವುಂಟು ಮಾಡಿದ ಬೈಕ್ ಸವಾರ ಅಮೃತ್‌ಸಿಂಗ್‌ನನ್ನು ಬಂಧಿಸಿರುವ ಹಲಸೂರು ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News