×
Ad

ರಾಷ್ಟ್ರಮಟ್ಟದ ರಸಪ್ರಶ್ನೆ ಸ್ಪರ್ಧೆ: ಎಸ್‌ಡಿಎಂಗೆ ಪ್ರಶಸ್ತಿ

Update: 2019-12-14 20:46 IST

ಉಡುಪಿ, ಡಿ.14: ಉಡುಪಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಕಿರುವೈದ್ಯರಾದ ಡಾ.ಅರ್ಪಿತಾ ಎಚ್.ಆರ್. ಹಾಗೂ ಡಾ.ಪ್ರತಿಮಾ ಪೌಡೆಲ್ ರಾಷ್ಟ್ರಮಟ್ಟದ ಆಯುರ್‌ವಿ -4 ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.

ಇತ್ತೀಚೆಗೆ ಬೆಂಗಳೂರಿನ ಮಲ್ಲೇಶ್ವರಂ ಜೆ.ಎನ್.ಟಾಟಾ ಅಡಿಟೋರಿಯಂ ನಲ್ಲಿ ಆಯೋಜಿಸಲಾದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ದೇಶದಾದ್ಯಂತ 145ಕ್ಕೂ ಅಧಿಕ ಆಯುರ್ವೇದ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ.ಜಿ ಶ್ರೀನಿವಾಸ ಆಚಾರ್ಯ, ಸ್ನಾತಕೋತ್ತರ ವಿಭಾಗದ ಸಹಾಯಕ ಮುಖ್ಯಸ್ಥ ಡಾ.ನಾಗರಾಜ್ ಎಸ್., ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿಗಳಾದ ಡಾ.ಸುಚೇತ ಕುಮಾರಿ, ಡಾ.ವೀರಕುಮಾರ ಹಾಗೂ ಸಾಂಸ್ಕೃತಿಕ ಹಾಗೂ ಕಲೆ ವಿಭಾಗದ ಸಂಯೋಜಕ ಡಾ.ವಿಜಯೇಂದ್ರ ಭಟ್ ಸಾಧನೆಯನ್ನು ಶ್ಲಾಘಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News