ಇರಾ ಗ್ರಾಪಂ ಅಧ್ಯಕ್ಷರ ಮೇಲೆ ಹಲ್ಲೆ ಪ್ರಕರಣ: ಮತ್ತಿಬ್ಬರ ಬಂಧನ

Update: 2019-12-14 16:41 GMT

ಬಂಟ್ವಾಳ, ಡಿ. 14: ತಾಲೂಕಿನ ಇರಾ ಗ್ರಾಪಂ ಅಧ್ಯಕ್ಷ ರಝಾಕ್ ಕುಕ್ಕಾಜೆ ಅವರ ಹಲ್ಲೆ, ಕೊಲೆಗೆ ಸಂಚು ಆರೋಪದ ಮೇರೆಗೆ ಇಬ್ಬರನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಇಲ್ಲಿಮ ನಿವಾಸಿಗಳಾದ ಕುಂಞಿ ಮೋನು, ಮಸೀದಿ ಮಾಜಿ ಅಧ್ಯಕ್ಷ ತೋಟ ಅಬೂಬಕರ್ ಬಂಧಿತರು ಎಂದು ತಿಳಿದುಬಂದಿದೆ. ಬಂಧಿತರಲ್ಲಿ ಕುಂಞಿ ಮೋನು ರಝಾಕ್ ಅವರ ಸ್ವಂತ ಅಣ್ಣ ಹಾಗೂ ಇನ್ನೊರ್ವ ವ್ಯಕ್ತಿಯು ಸಂಬಂಧಿ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿದೆ. ಆರೋಪಿಗಳಿಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಅವರ ಮಾರ್ಗದರ್ಶನದಲ್ಲಿ ಗ್ರಾಮಾಂತರ ಪೊಲೀಸ್ ಠಾಣಾ ಎಸ್ಸೈ ಪ್ರಸನ್ನ ನೇತೃತ್ವದಲ್ಲಿ ಸಿಬ್ಬಂದಿಗಳಾದ ಜನಾರ್ದನ, ನಝೀರ್, ಶೇಖರ್ ಚಾವಗಲ್ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.‌

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News