ಬಸ್‍ಗಳ ನಡುವೆ ಅಪಘಾತ: ಹಲವರಿಗೆ ಗಾಯ

Update: 2019-12-14 17:29 GMT

ಶಿವಮೊಗ್ಗ, ಡಿ. 14: ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಚಂಗೋಳ್ಳಿ ಎಂಬಲ್ಲಿ ಶನಿವಾರ ಮುಂಜಾನೆ 7 ಗಂಟೆ ಸುಮಾರಿಗೆ ಸಿಗಂದೂರಿನಿಂದ ಹೊರಟ ಕೆಎಸ್‍ಆರ್‍ಟಿಸಿ ಬಸ್ ಹಾಗು ಬೆಂಗಳೂರಿನಿಂದ ಸಿಗಂದೂರಿಗೆ ತೆರಳುತ್ತಿದ್ದ ಮಿನಿ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು ಎರಡು ವಾಹನಗಳು ಸಂಪೂರ್ಣ ಜಖಂ ಆಗಿವೆ.

ಮಿನಿ ಬಸ್‍ನಲ್ಲಿ ಕಾಲೇಜು ವಿದ್ಯಾರ್ಥಿಗಳಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೆಎಸ್ಆರ್ಟಿಸಿ ಹಾಗು ಮಿನಿ ಬಸ್‍ನ ಚಾಲಕರ ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದೆ.

ಅವಘಡದಿಂದ ರಸ್ತೆಯಲ್ಲಿ ಕೆಲ ಸಮಯ ಸಂಚಾರ ವ್ಯತ್ಯಯವಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿಯಿತ್ತು, ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News