ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಯಿಂದ ಡಿಸ್ಟಾರ್ಜ್

Update: 2019-12-15 06:55 GMT

ಬೆಂಗಳೂರು, ಡಿ.15: ಇಲ್ಲಿನ ಮಲ್ಲೇಶ್ವರದಲ್ಲಿರುವ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ಗುಣಮುಖರಾಗಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಮಲ್ಲೇಶ್ವರಂನ ವೆಗಾಸ್ ಆಸ್ಪತ್ರೆಯಲ್ಲಿ ಸಿದ್ದರಾಮಯ್ಯ ಆಂಜಿಯೋ ಪ್ಲಾಸ್ಟಿ ಶಸ್ತ್ರ  ಚಿಕಿತ್ಸೆಗೆ ಒಳಗಾಗಿದ್ದರು.

ಕಳೆದ ಐದು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ  ಅವರು ಗುಣಮುಖರಾಗಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿದ್ದಾರೆ.

ಸಿದ್ದರಾಮಯ್ಯರಿಗೆ  9 ವರ್ಷಗಳ ಹಿಂದೆ     ರಕ್ತನಾಳ ಬ್ಲಾಕ್ ಆಗಿತ್ತು. 2000ನೇ ಇಸ್ವಿಯ ಆಗಸ್ಟ್ ನಲ್ಲಿ  ದಿಲ್ಲಿಯ ಎಸ್ಕಾರ್ಟ್ ಆಸ್ಪತ್ರೆಯಲ್ಲಿ ಸ್ಟೆಂಟ್ ಅಳವಡಿಸಲಾಗಿತ್ತು. ಇದೀಗ ಇನ್ನೊಂದು ಸ್ಟೆಂಟ್ ಅಳವಡಿಸಲಾಗಿದೆ.  

ಇದೀಗ ಸಿದ್ದರಾಮಯ್ಯರಿಗೆ 10-15 ದಿನಗಳ ಕಾಲ  ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ  ಮತ್ತು ಯಾವುದೇ ಪ್ರವಾಸ ಕೈಗೊಳ್ಳದಂತೆ ವೈದ್ಯರು ಸಲಹೆ ನೀಡಿದ್ದಾರೆ.  

ಚಿಕಿತ್ಸೆ ನೀಡಿದ ವೈದ್ಯರಿಗೆ ಧನ್ಯವಾದ ಹೇಳಿರುವ ಸಿದ್ದರಾಮಯ್ಯ ತಾನು ಈಗ ಸಂಪೂರ್ಣ ಗುಣಮುಖರಾಗಿರುವುದಾಗಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News