ಮಂಗಳೂರು ನಗರ ದಕ್ಷಿಣದಲ್ಲಿ 21 ಲಕ್ಷದ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ

Update: 2019-12-15 08:07 GMT

ಮಂಗಳೂರು, ಡಿ.15: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ವಾರ್ಡುಗಳಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರ ಸೂಚನೆಯಂತೆ ಹಲವು ಕಾರ್ಯಕ್ರಮಗಳಿಗೆ ಸ್ಥಳೀಯ ಮುಖಂಡರು ಶಿಲಾನ್ಯಾಸ ನೆರವೇರಿಸಿದರು.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಶಾಸಕರು, ಜೆಪ್ಪು ವಾರ್ಡಿನ ರೈಲ್ವೇ ಗೇಟಿನಿಂದ ಕನಕರಬೆಟ್ಟು ರಸ್ತೆಗೆ 7 ಲಕ್ಷ ರೂ.ನ ಕಾಂಕ್ರಿಟ್ ಕಾಮಗಾರಿ, ಅಳಪೆ ಉತ್ತರ ವಾರ್ಡಿನಲ್ಲಿ ತೋಡು ದುರಸ್ತಿ ಕಾಮಗಾರಿಗೆ 7 ಲಕ್ಷ ರೂ., ಕೊಡಿಯಾಲ್ ಬೈಲ್ ವಾರ್ಡಿನಲ್ಲಿ 7 ಲಕ್ಷ ರೂ. ವೆಚ್ಚದ ತಡೆಗೋಡೆ ದುರಸ್ತಿ ಕಾಮಗಾರಿಗಳಿಗೆ ಸಾರ್ವಜನಿಕರ ಮೂಲಕ ಶಿಲಾನ್ಯಾಸ ನೆರವೇರಿಸಿದ್ದೇವೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News