ಮಂಜೇಶ್ವರ : ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ; ಬೈಕ್ ಸವಾರರಿಬ್ಬರು ಮೃತ್ಯು
Update: 2019-12-15 11:42 GMT
ಮಂಜೇಶ್ವರ : ರಾಷ್ಟ್ರೀಯ ಹೆದ್ದಾರಿ 66 ರ ಮಂಜೇಶ್ವರ ಕರೋಡಾ ಬಳಿ ಕರ್ನಾಟಕ ಸಾರಿಗೆ ಇಲಾಖೆಯ ಬಸ್ಸೊಂದು ಬೈಕ್ ಗೆ ಢಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ರವಿವಾರ ಸಂಜೆ ನಡೆದಿದೆ.
ಕಾಸರಗೋಡಿನಿಂದ ಮಂಗಳೂರು ಕಡೆ ಸಂಚರಿಸುತ್ತಿದ್ದ ಕರ್ನಾಟಕ ಸಾರಿಗೆ ಇಲಾಖೆಯ ಬಸ್ ಕರೋಡಾ ಬಳಿ ಕುಂಜತ್ತೂರು ಕಡೆಯಿಂದ ಬರುತ್ತಿದ್ದ ಬೈಕ್ ಗೆ ಢಿಕ್ಕಿ ಹೊಡೆದಿದೆ. ಅಪಘಾತದಿಂದ ಬೈಕ್ ನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ನನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯುವ ರಸ್ತೆ ಮಧ್ಯೆ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಈ ಬಗ್ಗೆ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.