ಬೆಂಗಳೂರು: ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕಾರು ಚಾಲಕನ ಕೊಲೆ

Update: 2019-12-15 12:58 GMT

ಬೆಂಗಳೂರು, ಡಿ.15: ಹಳೇ ದ್ವೇಷದ ಹಿನ್ನೆಲೆ ಕಾರು ಚಾಲಕನೋರ್ವನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಕೊಲೆಗೈದಿರುವ ಘಟನೆ ಇಲ್ಲಿನ ಬಸವೇಶ್ವರನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ನಿವಾಸಿ ಸದಾನಂದ ಎಂಬುವರು ಕೊಲೆಯಾಗಿರುವ ಕಾರು ಚಾಲಕ ಎಂದು ಪೊಲೀಸರು ಗುರುತಿಸಿದ್ದಾರೆ.

ಶನಿವಾರ ರಾತ್ರಿ ಇಲ್ಲಿನ ಮಂಜುನಾಥನಗರ ಮುಖ್ಯರಸ್ತೆಯ ಮದ್ಯದಂಗಡಿಗೆ ಸದಾನಂದ ಬಂದಿದ್ದ. ಈ ವೇಳೆ, ಕೆಲ ದುಷ್ಕರ್ಮಿಗಳು ಈತನ ಮೇಲೆ ಉದ್ದೇಶ ಪೂರಕವಾಗಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಕೊಲೆಗೈದು ಪರಾರಿಯಾಗಿದ್ದಾರೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಸದಾನಂದ ವಿರುದ್ಧ ಹಲ್ಲೆ, ದೊಂಬಿ ಸೇರಿದಂತೆ ಇನ್ನಿತರ ಪ್ರಕರಣಗಳು ದಾಖಲಾಗಿವೆ. ಹಳೇ ದ್ವೇಷದ ಹಿನ್ನೆಲೆಯಿಂದಲೇ ದುಷ್ಕರ್ಮಿಗಳು ಈ ಕೃತ್ಯ ನಡೆಸಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದು, ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News