ಉಳ್ಳಾಲ: ಮದನಿ ವಿದ್ಯಾ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ

Update: 2019-12-15 15:04 GMT

ಉಳ್ಳಾಲ, ಡಿ.15: ಅಳೇಕಲದ ಮದನಿ ವಿದ್ಯಾ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟವು ಸಂಸ್ಥೆಯ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಜರುಗಿತು.

 ಮಂಗಳೂರು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಉಳ್ಳಾಲ ನಗರ ಸಭೆಯ ಕೌನ್ಸಿಲರ್ ಯು.ಎ ಇಸ್ಮಾಯಿಲ್ ಅಧ್ಯಕ್ಷತೆ ವಹಿಸಿದ್ದರು.ಸಂಸ್ಥೆಯ ಹಳೆ ವಿದ್ಯಾರ್ಥಿ ಹಾಗೂ ಅಂತಾರಾಷ್ಟ್ರೀಯ ಕ್ರೀಡಾಪಟು ಅಬ್ದುರ್ರಹ್ಮಾನ್ ಉಳ್ಳಾಲ ಧ್ವಜಾರೋಹಣಗೈದರು. ವಿದ್ಯಾರ್ಥಿ ನಾಯಕ ಶಮೀರ್ ಕ್ರೀಡಾ ಪ್ರತಿಜ್ಞೆಗೈದರು.

ಕೌನ್ಸಿಲರ್ ಅಸ್ಗರ್ ಅಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಮದನಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಕಾರ್ಯದರ್ಶಿ ಇಬ್ರಾಹೀಂ ಯು.ಎನ್, ಸಂಸ್ಥೆಯ ಸಂಚಾಲಕ ಯು.ಎಂ ಇಬ್ರಾಹಿಂ, ಸದಸ್ಯರಾದ ಹಸನಬ್ಬ ಮಾರ್ಗತ್ತಲೆ, ಸೈದಯ್ ತಾಹಿರ್ ತಂಙಳ್, ಕೋಶಾಧಿಕಾರಿ ಯು.ಪಿ. ಅರಬಿ, ಸಂಸ್ಥೆಯ ಪ್ರಾಂಶುಪಾಲ ಇಸ್ಮಾಯೀಲ್ ಟಿ., ನಿವೃತ್ತ ಶಾರೀರಿಕ ಶಿಕ್ಷಣ ಶಿಕ್ಷಕ ಲೋಕನಾಥ ರೈ,ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಜಯಂತಿ ಉಪಸ್ಥಿತರಿದ್ದರು.

ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಇಬ್ರಾಹೀಂ ಸ್ವಾಗತಿಸಿದರು. ಉಪನ್ಯಾಸಕರಾದ ಮುಹಮ್ಮದ್ ಅಶ್ರಫ್ ವಂದಿಸಿದರು. ಹಬೀಬ ರಹ್ಮಾನ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News