ಬೆಳ್ತಂಗಡಿ: ರಸ್ತೆ ಅಪಘಾತಕ್ಕೆ ಬೈಕ್ ಸವಾರರಿಬ್ಬರು ಬಲಿ

Update: 2019-12-15 16:22 GMT

ಬೆಳ್ತಂಗಡಿ: ನಡ ಗ್ರಾಮದ ಮಂಜೊಟ್ಟಿ ಎಂಬಲ್ಲಿ ರವಿವಾರ ಸಂಜೆ ಪಿಕಪ್ ಹಾಗೂ ದ್ವಿಚಕ್ರ ವಾಹನ ನಡುವೆ ಮುಖಾಮುಖಿ ನಡೆದ ಭೀಕರ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರಿಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ.

ಮೃತರು ನಾವೂರು ನಿವಾಸಿ ಸೇಸಪ್ಪ ಮೂಲ್ಯ ( 44) ಹಾಗೂ ಅವರ ಸಂಬಂಧಿ ನಾವೂರು ಜನತಾಕಾಲನಿ ನಿವಾಸಿ ಕಲ್ಯಾಣಿ (55) ಎಂದು ಗುರುತಿಸಲಾಗಿದೆ.

ರವಿವಾರ ಸಂಜೆ ಇವರಿಬ್ಬರು ದ್ವಿಚಕ್ರ ವಾಹನದಲ್ಲಿ ಬೆಳ್ತಂಗಡಿಯಿಂದ ನಾವೂರು ಕಡೆಗೆ ಹೋಗುತ್ತಿದ್ದ ವೇಳೆ ಮೊಂಜೊಟ್ಟಿ ತಿರುವಿನಲ್ಲಿ ವೇಗವಾಗಿ ಎದುರಿನಿಂದ ಬಂದ ಪಿಕಪ್ ವಾಹನ ನಿಯಂತ್ರಣ ಕಳೆದುಕೊಂಡು ಇವರು ಪ್ರಯಾಣಿಸುತ್ತಿದ್ದ ಸ್ಕೂಟಿಗೆ ಢಿಕ್ಕಿ ಹೊಡೆದಿದೆ. ಅಪಘಾತದಿಂದ ಗಂಭಿರವಾಗಿ ಗಾಯಗೊಂಡ ಸೇಸಪ್ಪ ಮೂಲ್ಯ ಸ್ಥಳದಲ್ಲಿಯೇ ಮೃತ ಪಟ್ಟಿದ್ದು, ಕಲ್ಯಾಣಿ ಅವರನ್ನು ಬೆಳ್ತಂಗಡಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರಿಗೆ ಕೊಂಡೊಯ್ಯುವ ವೇಳೆ ಅವರು ಮೃತಪಟ್ಟರು ಎಂದು ತಿಳಿದುಬಂದಿದೆ.

ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News