ಮಂಗಳೂರು: ಕ್ರಿಸ್ಮಸ್ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣೆ

Update: 2019-12-15 16:32 GMT

ಮಂಗಳೂರು, ಡಿ.15: ಕ್ರಿಸ್ಮಸ್ ಹಬ್ಬದ ಪ್ರಯುಕ್ತ ನಗರದ ಬಲ್ಮಠದಲ್ಲಿರುವ ಗ್ರೇಸ್ ಮಿನಿಸ್ಟ್ರಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಸುಮಾರು ಐವತ್ತಕ್ಕೂ ಅಧಿಕ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ರವಿವಾರ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು.

ಭವಿಷ್ಯದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ರೂಪಿಸುವ ದೃಷ್ಟಿಯಿಂದ ಈ ಸಂಸ್ಥೆ ಪ್ರತಿ ತಿಂಗಳು ಅರ್ಹ ವಿದ್ಯಾರ್ಥಿಗಳಿಗೆ ಮಾಸಿಕ ವಿದ್ಯಾರ್ಥಿ ವೇತನ ನೀಡುತ್ತಾ ಬಂದಿದೆ. ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಕ್ರಿಸ್ತನ ಶುಭ ಸಂದೇಶದೊಂದಿಗೆ ಸಂಸ್ಥೆಯ ಸಂಸ್ಥಾಪಕ ಡಾ.ಆಂಡ್ರೂ ರಿಚರ್ಡ್ ವಿದ್ಯಾರ್ಥಿ ವೇತನ ವಿಸ್ತರಿಸಿದರಲ್ಲದೆ ನೋಟ್ ಬುಕ್, ವಾಟರ್ ಬಾಟಲ್, ಸ್ಟೇಷನರಿ ಐಟಮ್ಸ್ ಹಾಗೂ ಕ್ರಿಸ್ಮಸ್ ಹಬ್ಬದ ಸಿಹಿ ತಿನಿಸುಗಳನ್ನು ವಿತರಿಸಿದರು.

ಇದೇ ಸಂದರ್ಭ ಸಾಂತಾಕ್ಲಾಸ್ ಮೂಲಕ ಮಕ್ಕಳಿಗೆ ಉಡುಗೋರೆಗಳನ್ನು ವಿತರಿಸಲಾಯಿತು. ಐಸಾಕ್ ರಿಚರ್ಡ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಖಜಾಂಜಿ ಪ್ರಮೀಳಾ, ಸದಸ್ಯರಾದ ಅನಿತಾ, ಸೆಬಾಸ್ಟಿನ್, ಪ್ರಶಾಂತ್ ಮತ್ತಿತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News