ಸಿದ್ದರಾಮಯ್ಯ, ಗುಂಡೂರಾವ್ ರಾಜೀನಾಮೆ ಅಂಗೀಕರಿಸದಂತೆ ವರಿಷ್ಠರಲ್ಲಿ ಪುಷ್ಪಾ ಅಮರನಾಥ್ ಮನವಿ
Update: 2019-12-15 18:33 GMT
ಮೈಸೂರು,ಡಿ.15: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ರಾಜೀನಾಮೆಯನ್ನು ಅಂಗೀಕರಿಸಬಾರದು ಎಂದು ಕರ್ನಾಟಕ ರಾಜ್ಯ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಕರ್ನಾಟಕ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರಲ್ಲಿ ಮನವಿ ಮಾಡಿದ್ದಾರೆ.
ಈ ಸಂಬಂಧ ನವದೆಹಲಿಯಲ್ಲಿ ಕರ್ನಾಟಕ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರನು ಭೇಟಿ ಮಾಡಿ ಮಾತುಕತೆ ನಡೆಸಿರುವ ಅವರು, ಸದ್ಯದ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ಅವರ ರಾಜೀನಾಮೆಯನ್ನು ಅಂಗೀಕರಿಸಬಾರದು. ಉಪಚುನಾವಣೆ ಸೂಲಿಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿರುವುದು ಸರಿಯಲ್ಲ. ಹಾಗಾಗಿ ಇದನ್ನು ಪರಿಶೀಲನೆ ನಡೆಸಿ ರಾಜೀನಾಮೆ ಅಂಗೀಕರಿಸಬಾರದು ಎಂದು ಹೇಳಿದ್ದಾರೆ.