ಗಡಿಯಾರದಲ್ಲಿ ರಕ್ತದಾನ ಶಿಬಿರ

Update: 2019-12-16 08:06 GMT

ಬಂಟ್ವಾಳ: ಬೂಮ್ ಬೂಮ್ ಗೈಸ್ ಗಡಿಯಾರ ಮತ್ತು ಸಮಸ್ತ ನಾಗರಿಕರು ಗಡಿಯಾರ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಜಂಟಿ ಆಶ್ರಯದಲ್ಲಿ ಯೆನೆಪೋಯ ಆಸ್ಪತ್ರೆ ದೇರಳಕಟ್ಟೆ ಇದರ ಸಹಭಾಗಿತ್ವದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರವು ಗಡಿಯಾರದ ಸರಕಾರಿ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಿತು.

ಕೆದಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಅಣ್ಣಪ್ಪ ಕುಲಾಲ್ ಅಧ್ಯಕ್ಷತೆ ವಹಿಸಿದ್ದು, ಎಂ.ಜೆ.ಎಂ ಗಡಿಯಾರ ಇದರ ಖತೀಬ್ ಇಬ್ರಾಹಿಂ ದಾರಿಮಿ ಉದ್ಘಾಟಿಸಿದರು.

ವೇದಿಕೆಯಲ್ಲಿ ಅಬ್ದುಲ್ ರಶೀದ್ ಸಖಾಫಿ, ಉಮರಬ್ಬ, ಅಶೋಕ್ ಶೆಟ್ಟಿ, ಬೀಪಾತುಮ್ಮ, ಅನ್ಸಾರ್ ಪಿ.ಕೆ, ಹಂಝ ಗಡಿಯಾರ, ಮೆಹತಾಬ್ ಎಂ.ಕೆ, ಜುನೈದ್ ಬುಡೋಳಿ, ರಶೀದ್ ಜೋಗಿಬೆಟ್ಟು ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಇದರ ನಿರ್ವಾಹಕರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಾಧಕರಾದ  ಶಿಯಾನ್ ಜೆ, ರಾಜೀವ್ ಶೆಟ್ಟಿ, ಮುಹಮ್ಮದ್ ಅಸನ್, ಸುಲೈಮ್ ಜೆ ಅವರನ್ನು ಸನ್ಮಾನಿಸಲಾಯಿತು.

ರಕ್ತದಾನ ಶಿಬಿರದಲ್ಲಿ ಒಟ್ಟು 31 ಮಂದಿ ಪಾಲ್ಗೊಂಡು ರಕ್ತದಾನ ಮಾಡಿದರು. ದಾನಿಗಳಿಂದ ರಕ್ತ ಸಂಗ್ರಹಿಸುವಲ್ಲಿ ಯೆನೆಪೋಯ ಆಸ್ಪತ್ರೆ ದೇರಳಕಟ್ಟೆ ಇದರ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಿದರು. ಅಶ್ರಫ್ ಅರಬಿ ಕಲ್ಲಡ್ಕ ಕಾರ್ಯಕ್ರಮ ನಿರೂಪಿಸಿದರು.

ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ)

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News