ಬಸ್-ಸ್ಕೂಟರ್ ನಡುವೆ ಅಪಘಾತ: 3 ವರ್ಷದ ಮಗು ಸ್ಥಳದಲ್ಲೇ ಸಾವು
Update: 2019-12-16 20:50 IST
ಮಡಿಕೇರಿ, ಡಿ.16: ಕೆಎಸ್ಆರ್ಟಿಸಿ ಬಸ್ ಮತ್ತು ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿ ಮೂರು ವರ್ಷದ ಗಂಡು ಮಗುವೊಂದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕುಶಾಲನಗರ ಸಮೀಪ ಬೈಚೇನಹಳ್ಳಿಯಲ್ಲಿ ನಡೆದಿದೆ.
ಗೊಂದಿಬಸವನಹಳ್ಳಿ ನಿವಾಸಿಗಳಾದ ಪರಮೇಶ್ವರ ಹಾಗೂ ಗೀತಾ ದಂಪತಿಗಳ ಪುತ್ರ ಪೃಥ್ವಿ (3) ಮೃತ ಮಗು. ಮಡಿಕೇರಿಯಿಂದ ಕುಶಾಲನಗರ ಕಡೆಗೆ ಬರುತ್ತಿದ್ದ ಬಸ್ ದೇವಾಲಯದಿಂದ ಮರಳುತ್ತಿದ್ದ ಸ್ಕೂಟರ್ ಗೆ ಢಿಕ್ಕಿಯಾದ ಪರಿಣಾಮ ಸ್ಕೂಟರ್ ನಲ್ಲಿದ್ದ ಪೃಥ್ವಿ ಮೇಲೆ ಬಸ್ ಚಕ್ರ ಹರಿದು ಸಾವು ಸಂಭವಿಸಿದೆ. ಕುಶಾಲನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.